Breaking News

ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಪದಗ್ರಹಣ

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಯ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಗುರುವಾರ ಅಧಿಕಾರ ಸ್ವೀಕರಿಸಲಿದ್ದು ಪಕ್ಷದ ನೂತನ ಕಟ್ಟಡದಲ್ಲಿ ಪದಗ್ರಹಣ ಕಾರ್ಯಕ್ರಮಕ್ಕೆ ನಡೆಯಲಿದೆ.

ಬೆಳಿಗ್ಗೆ 10.30ಕ್ಕೆ ಸೇವಾದಳ ಕಾರ್ಯಕರ್ತರ ಗೌರವ ರಕ್ಷೆಯೊಂದಿಗೆ ಪ್ರಾರಂಭವಾಗಲಿರುವ ಈ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಕುಮಾರ್‌, “ಈಗಾಗಲೇ ಪದಗ್ರಹಣ ಕಾರ್ಯಕ್ರಮಕ್ಕೆ ಸಿಎಂ ಅನುಮತಿ ನೀಡಿದ್ದಾರೆ. ಈ ಕಾರ್ಯಕ್ರಮ ಸುದ್ದಿ ಮಾಧ್ಯಮಗಳು ಹಾಗೂ ಜೂಮ್ ಆಪ್‌ ಮೂಲಕ ನೇರ ಪ್ರಸಾರವಾಗಲಿದೆ. ಆಹ್ವಾನವಿದ್ದವರು ಮಾತ್ರ ಆಗಮಿಸಬೇಕು. ಉಳಿದ ಕಾರ್ಯಕರ್ತರು ಜೂಮ್‌ ಆಪ್‌ ಹಾಗೂ ಸುದ್ದಿ ಮಾಧ್ಯಮಗಳ ಮೂಲಕ ವೀಕ್ಷಿಸಬೇಕು” ಎಂದು ತಿಳಿಸಿದ್ದಾರೆ.

ಈ ಕಾರ್ಯಕ್ರಮಕ್ಕೆ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ಕೇರಳದ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿತ್ತಲ, ಕೇರಳ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್ ಹಾಗೂ ರಾಜ್ಯ ನಾಯಕರು ಸೇರಿ 150 ಪ್ರಮುಖರನ್ನು ಆಹ್ವಾನಿಸಲಾಗಿದೆ.

Follow us on Social media

About the author