Breaking News

ಮಂಗಳೂರು: ಇಂದು ಒಂದೇ ದಿನ ಮೂವರ ಬಲಿ ಪಡೆದ ಕೊರೋನಾ! ಸಾವಿನ ಸಂಖ್ಯೆ 22ಕ್ಕೇರಿಕೆ!!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಜು.04 ರ ಶನಿವಾರ ಒಂದೇ ದಿನ ಜಿಲ್ಲೆಯಲ್ಲಿ ಮೂವರು ಕೊರೋನಾದಿಂದ ಬಲಿಯ್ತಾಗಿದ್ದಾರೆ.

ಇಂದು ಬೆಳಗ್ಗೆ ಸುಳ್ಯ ತಾಲೂಕಿನ ಕೆರೆಮೂಲೆ ನಿವಾಸಿ ವೃದ್ದೆ ಕೊರೊನಾಗೆ ಬಲಿಯಾಗಿದ್ದರು. ಇದೀಗ ಮತ್ತೆ ಇಬ್ಬರು ಸೇರಿ ಇಂದು ಒಟ್ಟು ಮೂವರು ಮೃತಪಟ್ಟಿದ್ದಾರೆ.

ಈ ನಡುವೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಶುಕ್ರವಾರ ಒಂದೇ ದಿನ ಜಿಲ್ಲೆಯಲ್ಲಿ 97ಪ್ರಕರಣ ದೃಡಪಟ್ಟಿತ್ತು. ಶುಕ್ರವಾರ ಜಿಲ್ಲಾಡಳಿತ ಬಿಡುಗಡೆ ಮಾಡಿದ ವರದಿಯಂತೆ ಸೋಂಕಿತರ ಸಂಖ್ಯೆ 1010 ಕ್ಕೆ ಏರಿಕೆ ಕಂಡಿತ್ತು.

Follow us on Social media

About the author