Breaking News

ಅನ್ಯ ಖಾಯಿಲೆಗಳಿಗೆ ಖಾಸಗಿ ವೈದ್ಯರು ಚಿಕಿತ್ಸೆ ನೀಡದಿದ್ದರೆ ನೋಂದಣಿ ರದ್ದು: ಬಿ. ಶ್ರೀರಾಮುಲು

ಧಾರವಾಡ : ಕೋವಿಡ್-19 ಕೊರೊನಾ ವೈರಸ್ ಚಿಕಿತ್ಸೆ ಹಾಗೂ ನಿಯಂತ್ರಣಕ್ಕಾಗಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದು, ಖಾಸಗಿ ಆಸ್ಪತ್ರೆಗಳ ವೈದ್ಯರು ಅನ್ಯ ಖಾಯಿಲೆಗಳಿಗೆ ಚಿಕಿತ್ಸೆ ನೀಡದಿದ್ದರೆ ವೈದ್ಯಕೀಯ ನೋಂದಣಿ ರದ್ದುಗೊಳಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ವೈದ್ಯಕೀಯ ವೃತ್ತಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳಬಾರದು. ಕೆಪಿಎಂಇ ಕಾಯ್ದೆಯಡಿ ನೋಂದಣಿಯಾಗಿರುವ ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳನ್ನು ತೆರೆದು ಕೋವಿಡ್‍ ಅಲ್ಲದ ಇತರೆ ಖಾಯಿಲೆಗಳಿಗೆ ಚಿಕಿತ್ಸೆ ನೀಡಿ ನೆರವಿಗೆ ಬರಬೇಕು ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಚಟುವಟಿಕೆಗಳ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ​ಖಾಸಗಿ ವೈದ್ಯರು ಮೊದಲಿನಂತೆ ತಮ್ಮ ಆಸ್ಪತ್ರೆಗಳನ್ನು ತೆರೆದು ಜನರ ಸಾಮಾನ್ಯ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಇದರಿಂದ ಸರಕಾರಿ ಆಸ್ಪತ್ರೆ ವೈದ್ಯರ ಮೇಲಿನ ಒತ್ತಡ ಕಡಿಮೆಯಾಗಿ, ಕೋವಿಡ್ ಪ್ರಕರಣಗಳಿಗೆ ಆದ್ಯತೆ ನೀಡಲು ಅನುಕೂಲವಾಗುತ್ತದೆ ಎಂದರು.

Follow us on Social media

About the author