Breaking News

ಆಗಸ್ಟ್‌ನಲ್ಲಿ ಶಿಕ್ಷಕರ ವರ್ಗಾವಣೆ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಇಂದು ಅಧಿಕಾರಿಗಳೊಂದಿಗೆ ಸಭೆ‌ ನಡೆಸಿ ಕೂಡಲೇ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಬೇಕೆಂದು ಸೂಚನೆ ನೀಡಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಶಿಕ್ಷಕರ‌ ವರ್ಗಾವಣಾ ನಿಯಮಗಳನ್ನು ಶಿಕ್ಷಣ‌ ಇಲಾಖೆ ಅಂತಿಮಗೊಳಿಸಿದೆ. ಕಳೆದ ಅಧಿವೇಶನದಲ್ಲಿ ಈ ಕಾಯ್ದೆಗೆ ಅನುಮೋದನೆ ದೊರಕಿತ್ತು. ಶಿಕ್ಷಕ, ಶಿಕ್ಷಣ ಸ್ನೇಹಿಯಾದ ವರ್ಗಾವಣಾ ನೀತಿಯು ಅನುಷ್ಠಾನಗೊಳ್ಳುವ ಸಮಯ ಸನ್ನಿಹಿತವಾಗಿದೆ’ ಎಂದು ಹೇಳಿದ್ದಾರೆ. 

ಕಳೆದ ಬಾರಿ ಕಡ್ಡಾಯ ವರ್ಗಾವಣೆಯಿಂದ ತೊಂದರೆಗೀಡಾಗಿದ್ದ ಶಿಕ್ಷಕರು ಈ‌ ಬಾರಿಯ ಮೊದಲ ಆದ್ಯತೆಯ ವರ್ಗಾವಣೆಯನ್ನು ಪಡೆಯಲಿದ್ದಾರೆ. 

ಈ ಬಾರಿ ಆಗಸ್ಟ್ 2020 ರ ಮಾಹೆಯಿಂದ ಶಿಕ್ಷಕರ‌ ವರ್ಗಾವಣೆಯು ಅನುಷ್ಠಾನಗೊಳ್ಳಲಿದೆ ಎಂದರು. 

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×