Breaking News

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ; ಹಾವೇರಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ

ಹಾವೇರಿ: ಈ ಬಾರಿಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹಾವೇರಿಯ ದ್ಯಾಮವ್ವನಗುಡಿ ಓಣಿಯ ವೈಷ್ಣವಿ ರಿತ್ತಿ (16) ಎಂಬ ವಿದ್ಯಾರ್ಥಿನಿ ಗಣಿತ ವಿಷಯದಲ್ಲಿ ಅನುತ್ತೀರ್ಣಗೊಂಡ ಕಾರಣ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಬಗ್ಗೆ ಹಾವೇರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಅದೇ ರೀತಿ ಬ್ಯಾಡಗಿ ತಾಲ್ಲೂಕಿನ ಕಾಶಂಬಿ ಗ್ರಾಮದ ಭಾರತಿ ಕೋಟಿ (16) ಎಂಬ ವಿದ್ಯಾರ್ಥಿನಿ ಕಡಿಮೆ ಅಂಕ ಅಂದರೆ ಶೇ 61.6ರಷ್ಟು ಬಂದಿವೆ ಎಂಬ ಕಾರಣದಿಂದ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಕೆಯನ್ನು ತಕ್ಷಣ ಪಾಲಕರು ಹಾವೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ.

ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ. ಕಾಗಿನೆಲೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow us on Social media

About the author