Breaking News

ಕಾರ್ಗಿಲ್ ಯುದ್ಧದಿಂದ ನಮ್ಮ ಯೋಧರ ಶಕ್ತಿ ಇಡೀ ವಿಶ್ವಕ್ಕೆ ಪರಿಚಯವಾಗಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಕಾರ್ಗಿಲ್ ಯುದ್ಧದಲ್ಲಿ ಭಾರತ ಪಾಕಿಸ್ತಾನ ಮಣಿಸಿದ ಐತಿಹಾಸಿಕ ದಿನಕ್ಕಿಂದು 21 ವರ್ಷ ತುಂಬಿದ್ದು, 21 ವರ್ಷಗಳ ಹಿಂದೆ ಇದೇ ದಿನ ನಾವು ಪಾಕಿಸ್ತಾನದ ವಿರುದ್ಧ ವಿಜಯ ಸಾಧಿಸಿದ್ದೆವು. ಕಾರ್ಗಿಲ್ ಯುದ್ಧದಿಂದ ನಮ್ಮ ಯೋಧರ ಶಕ್ತಿ ಇಡೀ ವಿಶ್ವಕ್ಕೇ ಪರಿಚಯವಾಗಿದೆ ಎಂದು ಕಾರ್ಗಿಲ್ ವಿಜಯ ದಿವಸ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಯೋಧರ ಬಲಿದಾನವನ್ನು ಸ್ಮರಿಸಿದ್ದಾರೆ. 

ಇಂದು ಕಾರ್ಗಿಲ್ ವಿಜಯ ದಿವಸ. ಕಾರ್ಗಿಲ್ ಹುತಾತ್ಮ ಯೋಧರಿಗೆ ನನ್ನ ಧನ್ಯವಾದಗಳು. 21 ವರ್ಷಗಳ ಹಿಂದೆ ಇದೇ ದಿನ ನಾವು ಪಾಕಿಸ್ತಾನದ ವಿರುದ್ಧ ವಿಜಯ ಸಾಧಿಸಿದ್ದೇವೆ. ದೇಶದ ವಿವಿಧೆಡೆ ಹುತಾತ್ಮ ಯೋಧರಿಗೆ ನಮನ ಸಲ್ಲಿಸುತ್ತಿದ್ದಾರೆ. 21 ವರ್ಷಗಳ ಹಿಂದೆ ಈ ದಿನ ಸೈನ್ಯವರು ಕಾರ್ಗಿಲ್ ಯುದ್ಧವನ್ನು ಗೆದ್ದಿತು. ಆಗ ಭಾರತ ಪಾಕಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಹೊಂದಲು ಪ್ರಯತ್ನಿಸುತ್ತಿತ್ತು. ಆದರೆ, ಒಂದು ಮಾತಿದೆ, ವಿನಾ ಕಾರಣ ಎಲ್ಲರೊಂದಿಗೂ ದ್ವೇಷ ಸಾಧಿಸುವುದು ದುಷ್ಟರ ಸ್ವಭಾವ ಎಂದು ಹೀಗೆ ಹೇಳುವ ಮೂಲಕ ವಿಜಯ್ ದಿವಸ್ ನೆನೆಯುತ್ತಲೇ ಪಾಕಿಸ್ತಾನಕ್ಕೆ ಚಾಟಿ ಬೀಸಿದರು. 

ಭಾರತದ ಭೂಮಿಯನ್ನು ವಶಪಡಿಸಿಕೊಳ್ಳಲು ಮತ್ತು ಅದರ ಆಂತರಿಕ ಸಂಘರ್ಷದಿಂದ ಅಲ್ಲಿನ ಜನರ ದೃಷ್ಟಿಯನ್ನು ಬೇರೆ  ಕಡೆಗೆ ಸೆಳೆಯುವ ತಂತ್ರದ ಭಾಗವಾಗಿ ಪಾಕಿಸ್ತಾನ ದುಷ್ಕೃತ್ಯ ಎಸಗಿತ್ತು ಎಂದು ಹೇಳಿದರು. 

ಯೋಧರಿಗಾಗಿ ವೆಬ್’ಸೈಟ್ ಮೂಲಕ ಗೌರವ ಸಲ್ಲಿಸಿ, ಅಟಲ್ ಬಿಹಾರಿ ವಾಜಪೇಯಿ ಮಾತು ಇಂದಿಗೂ ಪ್ರಸ್ತುತವಾಗಿದೆ. ಕಾರ್ಗಿಲ್ ಯುದ್ಧ ಹೊಸ ಮಂತ್ರ ಶುರುಮಾಡಿದೆ. ಎಂದಿದ್ದರು. ಯುದ್ಧದ ಪರಿಸ್ಥಿತಿ ನಮ್ಮ ಮನೋಬಲವನ್ನು ಬದಲಾಯಿಸಿತು. ನಮ್ಮ ಆಚಾರ, ವಿಚಾರ, ವ್ಯವಹಾರ,ಮರ್ಯಾದೆ ಎಲ್ಲವೂ ಬದಲಾಯಿತು. ಸಂಘ ಶಕ್ತಿ ಉಘೇ ಉಘೇ ಎಂಬುದನ್ನು ಎತ್ತಿ ತೋರಿಸಲಾಗಿಯಿತು ಎಂದು ತಿಳಿಸಿದರು. 

ಬಳಿಕ ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ಕುರಿತು ಮಾತನಾಡಿದ ಅವರು, ಕೊರೋನಾ ನಮ್ಮ ಜೀವನ ಶೈಲಿಯನ್ನು ಬದಲಾಯಿಸಿಬಿಟ್ಟಿದೆ. ಕೊರೋನಾ ಎದುರಿಸಲು ಮತ್ತಷ್ಟು ಶಕ್ತರಾಗಬೇಕು. ಮಾಸ್ಕ್ ಸದ್ಯ ನಮ್ಮ ಜೀವನದ ಅಂಗವಾಗಿದೆ. ಮಾತನಾಡುವಾಗ ಮಾಸ್ಕ್ ಇರಲೇಬೇಕು. ಆದರೆ, ಮಾಸ್ಕ್ ತೆಗೆದು ಮಾತನಾಡುತ್ತೀರಾ, ಇದರಿಂದ ಸೋಂಕು ಹರಡುತ್ತದೆ ಎಂದು ಬೇರಸ ವ್ಯಕ್ತಪಡಿಸಿದ ಅವರು, ವೈದ್ಯರು ಸತತ 8 ಗಂಟೆಗಳ ಕಾಲ ಮಾಸ್ಕ್ ಧರಿಸಿರುತ್ತಾರೆಂದು ಉದಾಹರಣೆ ನೀಡಿದರು. 

ಭಾರತದಲ್ಲಿ ಕೊರೋನಾ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣವು ಬೇರೆ ದೇಶಗಳಿಗಿಂತಲೂ ಉತ್ತಮವಾಗಿದೆ. ದೇಶದಲ್ಲಿ ಸಾವಿನ ಪ್ರಮಾಣ ಇತರ ದೇಶಗಳಿಗೆ ಹೋಲಿಸಿದರೆ ತೀರಾ ಕಡಿಮೆ ಇದೆ. ನಾವು ಜನರ ಪ್ರಾಣ ಉಳಿಸಲು ಸಮರ್ಥರಾಗಿದ್ದೇವೆ. ಆದರೆ, ಕೊರೋನಾ ವೈರಸ್ ಒಡ್ಡಿರುವ ಬೆದರಿಕೆ ಇನ್ನೂ ಮುಗಿದಿಲ್ಲ. ಇದು ಅನೇಕ ಪ್ರದೇಶಗಳಲ್ಲಿ ವೇಗವಾಗಿ ಹರಡುತ್ತಿದೆ. ನಾವು ಜಾಗರೂಕರಾಗಿರಬೇಕು ಎಂದು ದೇಶದನ ಜನರಿಗೆ ಎಚ್ಚರಿಸಿದ್ದಾರೆ. 

ಜಮ್ಮುವಿನ ಟ್ರೆವಾ ಎಂಬಲ್ಲಿನ ಸರಪಂಚರಾದ ಬಲ್ಬೀರ್‌ ಕೌರ್‌ ಎಂಬುವವರು ತಮ್ಮ ಪಂಚಾಯಿತಿಯಲ್ಲಿ 30 ಹಾಸಿಗೆಗಳ ಕ್ವಾರಂಟೈನ ಬೆಡ್‌ಗಳನ್ನು ನಿರ್ಮಿಸಿದ್ದಾರೆ. ಗ್ಯಾಂಡರ್‌ಬಾಲ್‌ನ ಚೌಂಟ್ಲಿವಾರ್‌ನ ಜೈತುನಾ ಬೇಗಂ ತಮ್ಮ ಪಂಚಾಯಿತಿ ಕೋವಿಡ್‌ ವಿರುದ್ಧ ಹೋರಾಡಲಿದೆ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಘೋಷಿಸಿದ್ದಾರೆ ಎಂದು ಹೇಳಿದ ಪ್ರಧಾನಿ, ತಮ್ಮ ಕಾರ್ಯಕ್ರಮದಲ್ಲಿ ಅವರ ಕೈಂಕರ್ಯಗಳನ್ನು ಸ್ಮರಿಸಿದರು. 

‘ಜಮ್ಮು ಕಾಶ್ಮೀರದ ಅನಂತನಾಗ್‌ ಪುರಸಭೆ ಅಧ್ಯಕ್ಷ ಮೊಹಮ್ಮದ್ ಇಕ್ಬಾಲ್ ಕೇವಲ ರೂ.50,000 ರೂ ವೆಚ್ಚದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸುವ ಯಂತ್ರವನ್ನು ಸಿದ್ಧಪಡಿಸಿದ್ದಾರೆ. ಇಡೀ ದೇಶದಲ್ಲಿ ಇಂತಹ ಅನೇಕ ಸ್ಪೂರ್ತಿದಾಯಕ ಕತೆಗಳಿವೆ ಎಂದು ಮೋದಿ ಹೇಳಿದರು. 

ಈ ಬಾರಿಯ ರಕ್ಷಾ ಬಂಧನವನ್ನು ವಿಭಿನ್ನ ರೀತಿಯಲ್ಲಿ ಆಚರಣೆ ಮಾಡಲು ಜನತೆ ಸಿದ್ಧತೆ ಕೈಗೊಂಡಿರುವುದು ಮತ್ತು ಅದನ್ನು ತಮ್ಮ ‘ಲೋಕಲ್‌ ಫಾರ್‌ ಓಕಲ್‌’ ಘೋಷಣೆಗೆ ಬೆಸೆಯುತ್ತಿರುವುದಕ್ಕೆ ಇದೇ ವೇಳೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹಬ್ಬದ ಸಂತೋಷವು ನಮ್ಮ ಸಮಾಜದಲ್ಲಿ ವ್ಯವಹಾರ ವಿಸ್ತರಿಸಲು ಸಹಾಯ ಮಾಡುತ್ತದೆ. ಅದು ಅವರಿಗೂ ಸಂತೋಷದಾಯಕ ಹಬ್ಬವಾಗಿಸಲು ಸಹಾಯ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು.

ಕ್ರೀಡೆ ಅಥವಾ ಇತರೆ ಯಾವುದೇ ಕ್ಷೇತ್ರಗಳಿರಲಿ ದೊಡ್ಡ ನಗರ, ಪ್ರಸಿದ್ಧ ಕುಟುಂಬ ಅಥವಾ ಪ್ರಸಿದ್ಧ ಶಾಲೆ/ ಕಾಲೇಜುಗಳಿಂದ  ಬಂದವರೇ ಹೆಚ್ಚಾಗಿ ಕಾಣುತ್ತಿದ್ದರು. ಆದರೆ, ಕಾಲ ಬದಲಾಗಿದೆ. ಹಳ್ಳಿಗಳು, ಸಣ್ಣ ಪಟ್ಟಣಗಳು ಮತ್ತು ಸಾಮಾನ್ಯ ಕುಟುಂಬಗಳ ಯುವಕರು ಈಗ ಮುಂದೆ ಬರುತ್ತಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ. 

‌ಕೊರೊನಾ ವೈರಸ್‌ನಿಂದ ಆಗಸ್ಟ್‌ 15ರಂದು ಸ್ವಾತಂತ್ರ ಪಡೆಯಲು ಭಾರತೀಯರು ಸಂಕಲ್ಪ ಮಾಡಬೇಕು. ಆತ್ಮನಿರ್ಭರ ಭಾರತ ಸಾಧಿಸಲು. ಹೊಸದನ್ನು ಕಲಿಯಲು, ಹೊಸದನ್ನು ತಿಳಿಸಲು ನಮ್ಮ ಕರ್ತವ್ಯಗಳಿಗೆ ನಾವು ಬದ್ಧರಾಗಿರಬೇಕು ಎಂದೂ ಅವರು ಸಲಹೆ ನೀಡಿದ್ದಾರೆ.

ಬೋರ್ಡ್ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳಿಸಿದ ಉತ್ತರ ಪ್ರದೇಶ, ಕೇರಳ, ತಮಿಳುನಾಡು ಮತ್ತು ಹರ್ಯಾಣದ ವಿದ್ಯಾರ್ಥಿಗಳ ಜೊತೆ ಇದೇ ವೇಳೆ ಪ್ರಧಾನಮಂತ್ರಿಗಳು ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಮುಂದಿನ ಗುರಿ, ಮನೆಯಲ್ಲಿನ ಪ್ರೋತ್ಸಾಹ ಮುಂತಾದ ವಿಚಾರಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×