Breaking News

ಕೋವಿಡ್ -19 ಹೋರಾಟ ನಿರತ ಆಶಾ ಕಾರ್ಯಕರ್ತರು, ನರ್ಸ್, ಅಂಗನವಾಡಿ ಕಾರ್ಯಕರ್ತರಿಗೆ ರಾಹುಲ್ ಶ್ಲಾಘನೆ

ನವದೆಹಲಿ : ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರ ತ್ಯಾಗವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ.
ಅಗತ್ಯದ ಸಂದರ್ಭದಲ್ಲಿ ದೇಶಕ್ಕಾಗಿ ದುಡಿಯುವುದೇ ನಿಜವಾದ ದೇಶಭಕ್ತಿ. ನಮ್ಮ ಸಮುದಾಯಕ ಕಾರ್ಯಕರ್ತರು ನಿಜವಾದ ದೇಶಭಕ್ತರು, ತೆರೆಮರೆಯ ನಾಯಕರು, ಮುಖ್ಯವಾಹಿನಿಯಿಂದ ದೂರವುಳಿದು ಜನರ ಸುರಕ್ಷತೆಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೊಗಳಿದ್ದಾರೆ.
ಭಯ ಹಾಗೂ ತಪ್ಪು ಮಾಹಿತಿಗಳು ವೈರಸ್ ಕಿಂತ ಅಪಾಯಕಾರಿಯಾಗಿರುವ ಪರಿಸ್ಥಿತಿಯಲ್ಲಿ ಸಮುದಾಯ ಕಾರ್ಯಕರ್ತರು ಜನರಿಗೆ ಸರಿಯಾದ ಮಾಹಿತಿ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದಿದ್ದಾರೆ.
ಒಂದು ದೇಶವಾಗಿ ನಾವು ಅವರಿಗೆ ಆಭಾರಿಯಾಗಿದ್ದೇವೆ. ಈ ಬಿಕ್ಕಟ್ಟು ಶಮನವಾದ ನಂತರ ಅವರ ಅಪೂರ್ವ ಕೊಡುಗೆಯನ್ನು ಗುರುತಿಸಿ ಅವರು ಕೆಲಸದ ಪರಿಸ್ಥಿತಿಗಳು ಸುಧಾರಣೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×