Breaking News

ದುಬೈನಿಂದ ಉಡುಪಿಗೆ ಬಂದ ಆರು ಮಂದಿಯಲ್ಲಿ ಕೊರೋನಾ ಸೋಂಕು ದ್ರಢ

ಉಡುಪಿ : ದುಬೈಯಿಂದ ಮೇ 12ರಂದು ಆಗಮಿಸಿದವರ ಪೈಕಿ ಉಡುಪಿ ಜಿಲ್ಲೆಯ ಆರು ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿರುವುದಾಗಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಕೊರೋನ ಕಾರಣಕ್ಕಾಗಿ ವಿದೇಶಗಳಲ್ಲಿ ಸಿಲುಕಿಕೊಂಡಿರುವ ಅನಿವಾಸಿ ಭಾರತೀಯರನ್ನು ಮರಳಿ ಭಾರತಕ್ಕೆ ತರುವ ಕಾರ್ಯಾಚರಣೆಯಡಿ 176 ಮಂದಿ ಮಂಗಳವಾರ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದರು. ಈ ಪೈಕಿ ಉಡುಪಿ ಜಿಲ್ಲೆಗೆ ಸೇರಿದ 49 ಮಂದಿಯನ್ನು ಜಿಲ್ಲೆಯ ಹೊಟೇಲ್‌ ನಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಇವರ ಗಂಟಲದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿ ಇಂದು ಬಂದಿದ್ದು, ಇವರಲ್ಲಿ ಆರು ಮಂದಿಯ ವರದಿ ಕೊರೋನ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಆರು ಮಂದಿಯನ್ನು ಅವರು ಉಳಿದುಕೊಂಡಿರುವ ಹೊಟೇಲ್‌ಗಳಿಂದ ಉಡುಪಿಯ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದವರು ಮಾಹಿತಿ ನೀಡಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×