Breaking News

ಪುತ್ತೂರು: ಕುಖ್ಯಾತ ಅಂತರ್ ರಾಜ್ಯ ದಂತಚೋರರನ್ನು ಬಂಧಿಸಿದ ಅರಣ್ಯ ಇಲಾಖೆ ತಂಡ

ಪುತ್ತೂರು: ಅರಣ್ಯ ಇಲಾಖೆಯ ವಿಶೇಷ ತಂಡ ಕುಖ್ಯಾತ ಅಂತರ್ ರಾಜ್ಯ ದಂತಚೋರರನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ ಘಟನೆ ಇಂದು ನಡೆದಿದೆ.

ಶಶಿಕುಮಾರ್, ಸತೀಶ್ , ವಿಜ್ಞೇಶ್, ವಿನಿತ್, ಸಂಪತ್‌ಕುಮಾರ, ರತೀಶ ಬಂಧಿತ ಆರೋಪಿಗಳು.

ಮಾಣಿ-ಮೈಸೂರು ಬೈಪಾಸ್ ರಸ್ತೆಯ ರಾಷ್ಟ್ರೀಯ ಹೆದ್ದಾರಿಯ ಮಹಾವೀರ ಆಸ್ಪತ್ರೆಗೆ ತಿರುಗುವ ಜಂಕ್ಷನ್ನಲ್ಲಿ ಆರೋಪಿಗಳನ್ನು ಅಡ್ಡಗಟ್ಟಿ ದಂತ ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ತಮಿಳುನಾಡು ಮತ್ತು ಕೇರಳ ಮೂಲದವರು ಎಂದು ಗುರುತಿಸಲಾಗಿದ್ದು, 6 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಸದರಿ ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ Y K ದಿನೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ V P ಕಾರ್ಯಪ್ಪ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿ ಕಿರಣ್ ಉಪ ವಲಯ ಅರಣ್ಯಾಧಿಕಾರಿ ಲೋಕೇಶ್ S N,

ಶಿವಾನಂದ್ ಆಚಾರ್ಯ, ಪ್ರಕಾಶ್‌ B T,ಕುಮಾರಸ್ವಾಮಿ, ಮೆಹಬೂಬ್, ಪ್ರಸಾದ್,ಅರಣ್ಯ ರಕ್ಷಕರು ನಿಂಗರಾಜ್,ಸುಧೀರ್,ಸತ್ಯನ್‌,ದೀಪಕ, ಉಮೇಶ,ಇಲಾಖೆ ವಾಹನ ಚಾಲಕ ಜಗದೀಶ್, ರೋಹಿತ್ ಪಾಲ್ಗೊಂಡಿದ್ದರು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×