ಕಾಶ್ಮೀರ : ಕೊರೋನಾ ಮಹಾಮಾರಿ ದೇಶವನ್ನೇ ನಡುಗಿಸುತ್ತಿದೆ ಇದರ ನಡುವೆ ಗಡಿಯಲ್ಲಿ ಉದ್ಧಟತನ ಮೆರೆದಿದ್ದ ಪಾಕಿಸ್ತಾನದ ಸೈನಿಕರನ್ನು ಭಾರತೀಯ ಯೋಧರು ಬರ್ಜರಿ ಬೇಟೆಯಾಡಿದ್ದು 15 ಪಾಕ್ ಸೈನಿಕರು ಹಾಗೂ 8 ಮಂದಿ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.
ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯ ಯೋಧರು ಪಾಕಿಸ್ತಾನದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದ್ದು ಈ ವೇಳೆ ಪಾಕಿಸ್ತಾನದ ಸೇನೆ ಹಾಗೂ ಭಯೋತ್ಪಾದಕರು ಸೇರಿ 23 ಮಂದಿ ಹತರಾಗಿದ್ದಾರೆ ಎಂದು ಭದ್ರತಾ ಪಡೆಯ ಅಧಿಕಾರಿಗಳಿಬ್ಬರು ಮಾಹಿತಿ ನೀಡಿದ್ದಾರೆ.
ಇನ್ನು ಭಾರತೀಯ ಸೇನೆ ದಾಳಿ ನಡೆಸಿರುವುದನ್ನು ಪಾಕಿಸ್ತಾನ ಸೇನೆ ಸಹ ಖಚಿತಪಡಿಸಿದೆ. ಈ ದಾಳಿಯಲ್ಲಿ 15 ವರ್ಷದ ಬಾಲಕಿ ಸೇರಿ ನಾಲ್ವರು ಗಾಯಗೊಂಡಿದ್ದಾರೆಂದು ಆರೋಪಿಸಿದೆ.
ಕೊರೋನಾ ವೈರಸ್ ನಿಂದಾಗಿ ದೇಶ ಆತಂಕದ ಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲೂ ಗಡಿ ನಿಯಂತ್ರಣ ರೇಖೆ ಬಳಿ 160ಕ್ಕೂ ಹೆಚ್ಚು ಭಯೋತ್ಪಾದಕರು ಗಡಿ ನುಸುಳಲು ಕಾದು ಕುಳಿತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿದಾಳಿ ಭಾರತಕ್ಕೂ ಅನಿರ್ವಾಯವಾಗಿದೆ.
ನಿನ್ನೆ ಜಮ್ಮು ಮತ್ತು ಕಾಶ್ಮೀರದ ಕೇರನ್ ಸೆಕ್ಟರ್ನಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಅಪ್ರಾಪ್ತ ಸೇರಿ ಮೂವರು ನಾಗರಿಕರು ಸಾವನ್ನಪ್ಪಿದ್ದರು.
Follow us on Social media