Breaking News

ಮಂಗಳೂರು: ಕಂಕನಾಡಿ ಠಾಣೆಯ ನಿರ್ಮಾಣ ಕಾಮಗಾರಿಯ ಹೆಚ್ಚುವರಿ ಅನುದಾನಕ್ಕಾಗಿ ಗೃಹ ಸಚಿವರಿಗೆ ಮನವಿ

ಮಂಗಳೂರು: ಕಂಕನಾಡಿ ನಗರ ಪೋಲಿಸ್ ಠಾಣೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಮಂಗಳೂರಿಗೆ ಆಗಮಿಸಿದ್ದ ಗೃಹ ಸಚಿವರನ್ನು ಭೇಟಿ ಮಾಡಿದ ಶಾಸಕ ಕಾಮತ್, ಈಗಾಗಲೇ ಕಂಕನಾಡಿ ನಗರ ಪೊಲೀಸ್ ಠಾಣೆಯು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ.ಕಟ್ಟಡ ತೀರ ಹಳೆಯದಾಗಿರುವ ಕಾರಣ ಸೋರುತ್ತಿದ್ದು ದಾಖಲೆಗಳನ್ನು ಸಂರಕ್ಷಿಸುವುದೂ ಕಷ್ಟಕರವಾಗಿದೆ. ಸ್ಥಳಾವಕಾಶದ ಕೊರತೆಯಿಂದ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗಳಿಗೆ ವಾಹನ ನಿಲುಗಡೆ ಸಮಸ್ಯೆಯೂ ಇದೆ.

ಪ್ರಸ್ತುತ ಪೊಲೀಸ್ ಇಲಾಖೆಗೆ ಸೇರಿದ ವಸತಿ ಗೃಹದ ಪಕ್ಕದಲ್ಲಿ ನೂತನ ಠಾಣೆಯನ್ನು ನಿರ್ಮಿಸಲು ಇಲಾಖೆಯಿಂದ 10 ಲಕ್ಷ ರೂಪಾಯಿ ಮಂಜೂರುಗೊಳಿಸಿ, ನಿರ್ಮಿತಿ ಕೇಂದ್ರ ಮಂಗಳೂರು ಇದರಿಂದ ಹೊಸ ಠಾಣೆಗೆ 2 ಅಂತಸ್ಥಿನ ಕಟ್ಟಡ ನಿರ್ಮಿಸಲಾಗಿದೆ. ಆ ನಂತರ ಅನುದಾನದ ಕೊರತೆಯಿಂದ ಕಾಮಗಾರಿ ಅರ್ದದಲ್ಲೇ ನಿಂತಿದ್ದು ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ 25 ಲಕ್ಷ ರೂಪಾಯಿಗಳ ಅವಶ್ಯಕತೆಯಿದೆ. ಹಾಗಾಗಿ ಪ್ರಥಮ ಆದ್ಯತೆಯ ಮೇರೆಗೆ ಅನುದಾನ ಬಿಡುಗಡೆಗೊಳಿಸಬೇಕೆಂದು ಶಾಸಕ ಕಾಮತ್ ಗೃಹ ಸಚಿವರಿಗೆ ಲಿಖಿತ ಮನವಿ ಸಲ್ಲಿಸಿದರು.

ಈ ಸಂದರ್ಭ ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ, ಬಿಜೆಪಿ ಮುಖಂಡ ಜಗದೀಶ್ ಶೇಣವ ಮತ್ತಿತರರು ಉಪಸ್ಥಿತರಿದ್ದರು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×