Breaking News

ಮಂಗಳೂರು: ‘ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ’ – ಯು.ಟಿ ಖಾದರ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ದರೋಡೆ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ಅಲ್ಲಲ್ಲಿ ದರೋಡೆ ಪ್ರಕರಣಗಳು ಜಾಸ್ತಿಯಾಗುತ್ತಿದ್ದು,ರಾತ್ರಿ ಮನೆಯಲ್ಲಿ ಮಲಗೋಕೂ ಹೆದರಿಕೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ನೈತಿಕ ಪೋಲಿಸ್ ಗಿರಿಗೆ ಅವಕಾಶ ಮಾಡಿಕೊಡಲಾಗಿದ್ದು, ಪೊಲೀಸ್ ಕ್ರಮ ಕೈಗೊಂಡರೆ ಪೊಲೀಸರ ವಿರುದ್ಧವೇ ದೂರು ಕೊಡುತ್ತಾರೆ” ಎಂದರು.

“ಲವ್ ಜಿಹಾದ್ ಬಗ್ಗೆ ಸರ್ಕಾರ ಕಾನೂನು ಮಾಡಬೇಕು, ಕಾರ್ಯಕಾರಿಣಿ ಸಭೆಯಲ್ಲಿ ಲವ್ ಜಿಹಾದ್ ಕಾನೂನು ತರುತ್ತೇವೆ ಅಂತಾ ಹೇಳಿದ್ದರು ಆದರೆ, ಗ್ರಾಮ ಪಂಚಾಯತ್ ಚುನಾವಣೆ ಮುಗಿದ ತಕ್ಷಣ ಆ ಬಗ್ಗೆ ಚಕಾರ ಎತ್ತುತ್ತಿಲ್ಲ” ಎಂದಿದ್ದಾರೆ.

ಇನ್ನು ಸುದ್ದಿಗೋಷ್ಠಿ ನಡೆಸಿ ಬಹಿರಂಗ ಎಚ್ಚರಿಕೆ ನೀಡುವ ಬಗ್ಗೆ ಪೊಲೀಸರು ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ, ಸರ್ಕಾರ ಮೊದಲು ಕಾನೂನು ತರಲಿ, ಕಾನೂನು ತರದಿದ್ದರೆ ಸರ್ಕಾರದ ವಿರುದ್ಧವೇ ಪ್ರತಿಭಟನೆ ಮಾಡಲಿ” ಎಂದು ಹೇಳಿದ್ದಾರೆ.

Follow us on Social media

About the author