Breaking News

ಮಂಗಳೂರು: ಜೂ. 10 ರಿಂದ ಪಿಲಿಕುಳ ನಿಸರ್ಗಧಾಮ ಸಾರ್ವಜನಿಕ ವೀಕ್ಷಣೆಗೆ ಮುಕ್ತ

ಮಂಗಳೂರು : ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಜೂನ್ 10 ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯ ಎಂದು ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.

ಕೋವಿಡ್-19 ನಿಯಂತ್ರಣದ ಹಿನ್ನೆಲೆಯಲ್ಲಿ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಎಲ್ಲಾ ವಿಭಾಗಗಳನ್ನು ಕಳೆದ ಮೂರು ತಿಂಗಳಿಂದ ಮುಚ್ಚಲಾಗಿದ್ದು ಈಗ ಸರ್ಕಾರದ ಆದೇಶ ಅನುಸರಿಸಿ ಕೋವಿಡ್-19 ನಿಯಂತ್ರಣ ಮಾರ್ಗಸೂಚಿಯ ಎಲ್ಲಾ ಸೂಚನೆಗಳನ್ನು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಾಲಕಾಲಕ್ಕೆ ನೀಡುವ ಮಾರ್ಗಸೂಚಿ, ಎಸ್‍ಒಪಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತುಗೊಳಪಟ್ಟು ಜೂನ್ 10 ರಿಂದ ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜೈವಿಕ ಉದ್ಯಾನ, ಲೇಕ್ ಗಾರ್ಡನ್, ಸಂಸ್ಕøತಿ ಗ್ರಾಮ, ಆರ್ಬೋರೇಟಮ್ ಮತ್ತು ಗುತ್ತು ಮನೆಯ ಆಕರ್ಷಣೆಗಳನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುತ್ತದೆ.

ಪ್ರಾದೇಶಿಕ ವಿ.ಜ್ಞಾನ ಕೇಂದ್ರ ಮತ್ತು ತಾರಾಲಯವನ್ನು ಈಗ ತೆರೆಯದೆ ಮುಂದಿನ ದಿನಗಳಲ್ಲಿ ಸರ್ಕಾರದ ಆದೇಶವನ್ನು ಅನುಸರಿಸಿ ತೆರೆಯಲಾಗುತ್ತದೆ. ಪ್ರತೀ ಸೋಮವಾರ ವಾರದ ರಜೆ ಇರುತ್ತದೆ.

ಸಾರ್ವಜನಿಕರು ಪಿಲಿಕುಳ ನಿಸರ್ಗಧಾಮದ ಆಕರ್ಷಣೆಗಳನ್ನು ವೀಕ್ಷಿಸಲು ಭೇಟಿ ನೀಡುವ ಸಮಯದಲ್ಲಿ ಈ ಪಾಲಿಸಬೇಕಾದ ಸೂಚನೆಗಳು ಇಂತಿವೆ:-

ಎಲ್ಲಾ ಸಂದರ್ಭಗಳಲ್ಲಿ ಕನಿಷ್ಠ 6 ಅಡಿ ಭೌತಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಸಂದರ್ಶಕರು ಮುಖಗವಸನ್ನು (ಮಾಸ್ಕ್) ಧರಿಸಲೇಬೇಕು. ಧರಿಸದಿದ್ದವರಿಗೆ ಪ್ರವೇಶವಿರುವುದಿಲ್ಲ. ಎಲ್ಲಾ ಸಂದರ್ಶಕರನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ತಪಾಸಣೆ ಮಾಡಲಾಗುತ್ತದೆ. ಸಂದರ್ಶಕರ ದೇಹದ ಉಷ್ಣತೆಯು ಮಿತಿಗಿಂತ ಹೆಚ್ಚಿದ್ದರೆ ಅಂತಹ ವ್ಯಕ್ತಿಗಳಿಗೆ ಪ್ರವೇಶವನ್ನು ನಿರಾಕರಿಸಲಾಗುತ್ತದೆ. ಯಾವುದೇ ಸಂದರ್ಶಕರಿಗೆ ಜ್ವರ, ಕೆಮ್ಮು, ಶೀತ, ಗಂಟಲುನೋವು ಅಥವಾ ಉಸಿರಾಟದ ತೊಂದರೆ ಇದ್ದರೆ ಅಂತಹ ವ್ಯಕ್ತಿಗಳಿಗೆ ಪ್ರವೇಶವನ್ನು ನಿರಾಕರಿಸಲಾಗುತ್ತದೆ. ಲೇಕ್‍ನಲ್ಲಿ ಮಕ್ಕಳ ಆಟಕ್ಕೆ ಅವಕಾಶವಿರುವುದಿಲ್ಲ ಎಂದು ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×