Breaking News

ಮಂಗಳೂರು: ‘ದೇಶದ ಎಲ್ಲಾ ಗಲಭೆಗಳ ಹಿಂದೆ ಕಾಂಗ್ರೆಸ್ ನಾಯಕರ ಕೈ ಇದೆ’ – ನಳಿನ್‌‌

ಮಂಗಳೂರು : ದೇಶದ ಎಲ್ಲಾ ಹಗರಣಗಳ ಹಿಂದೆ ಕಾಂಗ್ರೆಸ್ಸಿನ ಕೈ ಇರುವಂತೆ, ದೇಶದ ಎಲ್ಲಾ ಗಲಭೆಗಳ ಹಿಂದೆಯೂ ಕಾಂಗ್ರೆಸ್ ನಾಯಕರ ಕೈ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌‌ ಕಟೀಲ್‌ ‌ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ದೇಶದ ಎಲ್ಲಾ ಹಗರಣಗಳ ಹಿಂದೆ ಕಾಂಗ್ರೆಸ್ಸಿನ ಕೈ ಇರುವಂತೆ, ದೇಶದ ಎಲ್ಲಾ ಗಲಭೆಗಳ ಹಿಂದೆಯೂ ಕಾಂಗ್ರೆಸ್ ನಾಯಕರ ಕೈ ಇರುತ್ತದೆ.!! ಅವರು ಅಧಿಕಾರದಲ್ಲಿದ್ದಾಗ ದೇಶ ವಿರೋಧಿಗಳಿಗೆ ಬೆಂಬಲ ನೀಡುವುದು, ಗಲಭೆಕೋರರ ಮೇಲಿನ ಪ್ರಕರಣಗಳನ್ನು ರದ್ದು ಮಾಡುವುದು, ಅಧಿಕಾರ ಕಳೆದುಕೊಂಡಾಗ ದೇಶದಲ್ಲಿ ಗಲಭೆ ಎಬ್ಬಿಸಿ ಸಮಾಜದ ಶಾಂತಿ ಕದಡಿ ಆಡಳಿತ ಪಕ್ಷದ ಮೇಲೆ ಗೂಬೆ ಕೂರಿಸುವುದು. ಇದು ಐಎನ್‌‌ಸಿ ನಾಯಕರ ಸಿದ್ಧಾಂತ ಎಂದಿದ್ದಾರೆ.

ಸಮಾಜದಲ್ಲಿ ಬೆಂಕಿ ಹಚ್ಚುವ ಸಮಾಜಘಾತುಕರನ್ನು ಮಟ್ಟಹಾಕಿ ಶಾಂತಿಯುತ ಸಮಾಜ ಕಟ್ಟಬೇಕಾದ ರಾಷ್ಟ್ರೀಯ ಪಕ್ಷವೊಂದು ರಾಜಕೀಯ ಲಾಭಕ್ಕಾಗಿ ಬೆಂಕಿ ಇಡುವ ಕೆಲಸಕ್ಕೆ ಇಳಿದಿರುವುದು ಅತ್ಯಂತ ಹೀನಾಯ.!! ಎಂದು ಹೇಳಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×