Breaking News

ಮಂಗಳೂರು: ದ.ಕ. ಜಿಲ್ಲೆಯಲಿ ತಾತ್ಕಾಲಿಕ ಕೊವೀಡ್ ಆಸ್ಪತ್ರೆ ನಿರ್ಮಾಣ ಮಾಡಿ – ಮಿಥುನ್ ರೈ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಜಿಲ್ಲೆಯಲ್ಲಿ 1000 ಸಾವಿರ ಹಾಸಿಗೆಗಳ ತಾತ್ಕಾಲಿಕ ಕೋವಿಡ್ ಆಸ್ಪತ್ರೆಯನ್ನು ಆರಂಭಿಸಬೇಕೆಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈಯವರು ಜಿಲ್ಲಾಡಳಿವನ್ನು ಮತ್ತು ಸರ್ಕಾರವನ್ನು ಆಗ್ರಹಿಸಿದ್ದಾರೆ.

ವೆನ್ಲಾಕ್ ಆಸ್ಪತ್ರೆಯು ನಮ್ಮ ಜಿಲ್ಲೆಯವರೂ ಕೂಡಾ ಅಲ್ಲದೆ ಇತರ ನೆರೆಯ ಕೊಡಗು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ರೋಗಿಗಳು ಆಶ್ರಯಿಸುತ್ತಾ ಬಂದಿದ್ದು ಈಗ ಅದು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡಾಗಿರುವ ಕಾರಣ ಇತರ ಆರೋಗ್ಯ ಸಮಸ್ಯೆಯುಳ್ಳ ರೋಗಿಗಳು ಕಷ್ಟಪಡುವಂತಾಗಿವೆ.

ವೆನ್ಲಾಕ್ ಆಸ್ಪತ್ರೆಯನ್ನು ನಮ್ಮ ಜಿಲ್ಲೆಯವರು ಮಾತ್ರವಲ್ಲದೇ ನೆರೆಯ ಕೊಡಗು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ರೋಗಿಗಳು ಆಶ್ರಯಿಸಿದ್ದಾರೆ. ಈಗ ಅದು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡಾಗಿರುವ ಕಾರಣ ಇತರ ಆರೋಗ್ಯ ಸಮಸ್ಯೆಯುಳ್ಳ ರೋಗಿಗಳು ಕಷ್ಟಪಡುವಂತಾಗಿವೆ. ಅಲ್ಲದೆ ಬೆಂಗಳೂರಿನಂತೆ ಮಂಗಳೂರಿನಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚೆಚ್ಚು ಬರುತ್ತಿರುವುದರಿಂದ ಇಲ್ಲಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯ ಹಾಸಿಗೆಗಳು ಕೊರತೆಯಾಗಿ ಇದರ ಪರಿಣಾಮ ಸೋಂಕಿನಿಂದಾಗುವ ಅಪಾಯ ಕೈ ಮೀರಲಿದ್ದು, ಮುನ್ನೆಚ್ಚರಿಕೆಯಾಗಿ ಅತೀ ಶೀಘ್ರದಲ್ಲಿ ಕೋವಿಡ್ ಪ್ರಾದೇಶಿಕ ಆಸ್ಪತ್ರೆ ನಿರ್ಮಾಣ ಮಾಡಬೇಕು. ಜೊತೆಗೆ ಜಿಲ್ಲೆಯಲ್ಲಿ ಸಮೂಹ ತಪಾಸಣೆ ಮಾಡಬೇಕೆಂದು ಮಿಥುನ್ ರೈ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×