Breaking News

ಮಂಗಳೂರು: ನೋಟಿನ ಬಂಡಲ್ ಪತ್ತೆ ಪ್ರಕರಣ – ವಾರಸುದಾರ ಪೊಲೀಸ್ ಠಾಣೆಗೆ ಹಾಜರ್

ಮಂಗಳೂರು: ಪಂಪ್‌ವೆಲ್‌ನಲ್ಲಿ ಕುಡುಕನೋರ್ವನಿಗೆ ಬಿದ್ದು ಪತ್ತೆಯಾಗಿದ್ದ ನೋಟಿನ ಬಂಡಲ್‌ನ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.

ಆ ವ್ಯಕ್ತಿ ಠಾಣೆಗೆ ಬಂದು ‘ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ ತೆಗೆದುಕೊಂಡು ಹೋಗುವಾಗ ಬಿದ್ದಿದ್ದು, ಅದರಲ್ಲಿ ಒಟ್ಟು 10 ಲಕ್ಷ ರೂ ಇತ್ತು ಎಂಬುದಾಗಿ ಆ ವ್ಯಕ್ತಿ ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ನ್ಯಾಯಾಲಯದಲ್ಲಿಯೇ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ಆ ವ್ಯಕ್ತಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಪಂಪ್‌ವೆಲ್ ಬಸ್ ನಿಲ್ದಾಣದ ಬಳಿ ನೋಟಿನ ಬಂಡಲ್‌ಗಳು ನವಂಬರ್ 26ರಂದು ಶಿವರಾಜ್ ಮತ್ತು ತುಕಾರಾಮ್ ಎಂಬವರಿಗೆ ಸಿಕ್ಕಿದ್ದು, ಶಿವರಾಜ್ ಬಳಿ ಇದ್ದ ನೋಟಿನ ಕಂತೆಯನ್ನು ಪೊಲಿಸರು ವಶಪಡಿಸಿಕೊಂಡಿದ್ದರು.

ಆದರೆ ಇದೀಗ ವ್ಯಕ್ತಿಯೊಬ್ಬರು ಠಾಣೆಗೆ ತೆರಳಿ ತಾನೇ ಆ ಹಣದ ವಾರಸುದಾರ ಎಂದು ಹೇಳಿಕೊಂಡಿದ್ದು ತನಿಖೆ ನಡೆಯುತ್ತಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×