Breaking News

ಮುಲ್ಕಿ: ಹಿಂದುಗಳ ಹಬ್ಬಕ್ಕೂ ತೆನೆ ವಿತರಿಸಿ ಮಾದರಿಯಾದ ಏಳಿಂಜೆಯ ಹಿರಿಯ ಕೃಷಿಕ ಜೋಸೆಫ್ ಡಾಲ್ಫಿ ಡಿಸೋಜ

ಮುಲ್ಕಿ: ಕಿನ್ನಿಗೋಳಿ ಸಮೀಪದ ಏಳಿಂಜೆ ಯ ಹಿರಿಯ ಕೃಷಿಕ ಜೋಸೆಫ್ ಡಾಲ್ಫಿ ಡಿಸೋಜ ರವರು ತಮ್ಮ ಸಮುದಾಯದ ತೆನೆಹಬ್ಬದ ಹಬ್ಬದ ಆಚರಣೆ ಜೊತೆಗೆ ಹಿಂದುಗಳ ಹಬ್ಬ ವಾಗಿರುವ ಗಣೇಶ ಚತುರ್ಥಿಗೆ ತೆನೆಯನ್ನು ವಿತರಿಸಿ ಮಾದರಿಯಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಏಳಿಂಜೆಯಲ್ಲಿ ಸಾವಯವ ಕೃಷಿ ಮಾಡುತ್ತಿರುವ ಕೃಷಿಕ ಜೋಸೆಫ್ ಡಾಲ್ಫಿ ಡಿಸೋಜ ತೆನೆ ಹಬ್ಬಕ್ಕೆಂದೇ ವಿಶೇಷವಾಗಿ ಸಾವಯವ ಕೃಷಿ ಮಾಡುತ್ತಿದ್ದು ಈ ಬಾರಿ ಗಣೇಶ ಚತುರ್ಥಿ ಹಾಗೂ ಕೃಷ್ಣ ಜನ್ಮಾಷ್ಟಮಿ ಹಬ್ಬಗಳು ಬೇಗ ಬಂದಿರುವ ಕಾರಣ ಎಲ್ಲೆಡೆ ತೆನೆಯ ಫಸಲು ವಿರಳವಾಗಿದೆ.ಆದರೆ ಕೃಷಿಕ ಜೋಸೆಫ್ ಡಾಲ್ಫಿ ಡಿಸೋಜ ಈ ಬಾರಿ ಬೇಗ ಕೃಷಿ ಶುರು ಮಾಡಿದ್ದು ಉತ್ತಮ ಫಸಲು ಪಡೆದಿದ್ದಾರೆ. ಫಸಲಿಗೆ ನವಿಲಿನ ಕಾಟ ಇರುವುದರಿಂದ ರಕ್ಷಣೆಗಾಗಿ ತಡೆಬೇಲಿ ಕೂಡ ಹಾಕಿದ್ದಾರೆ. ಗಣೇಶ ಚತುರ್ಥಿಯ ದಿವಸ ಹಿಂದೂ ಬಾಂಧವರ ದೇವಸ್ಥಾನ ದೈವಸ್ಥಾನ, ದೈವಸ್ಥಾನ. ಮನೆಗಳಿಗೆ ಉಚಿತ ತೆನೆ ವಿತರಿಸಿ ವಿತರಿಸುತ್ತಿರುವ ಕೃಷಿಕ ಜೋಸೆಫ್ ಡಾಲ್ಫಿ ಡಿಸೋಜ ತಮ್ಮ ಬಾಂಧವರ ಚರ್ಚುಗಳಲ್ಲಿ ನಡೆಯುತ್ತಿರುವ ತೆನೆ ಹಬ್ಬಕ್ಕೂ ಉಚಿತವಾಗಿ ತೆನೆ ಪೂರೈಕೆ ಮಾಡಿ ಮಾದರಿಯಾಗಿದ್ದಾರೆ.

ಜಾತಿ ಮತ ಧರ್ಮಕ್ಕಾಗಿ ಹೊಡೆದಾಡುವ ಈ ಕಾಲದಲ್ಲಿ ಜಾತ್ಯಾತೀತ ಮನೋಭಾವನೆಯಿಂದ ತೆನೆಹಬ್ಬಕ್ಕಾಗಿ ಪೈರನ್ನು ಬೆಳೆಸಿ ಎಲ್ಲಾ ಧರ್ಮದವರಿಗೂ ತೆನೆ ಪೈರನ್ನು ಉಚಿತವಾಗಿ ಪೂರೈಸುವ ಮುಖಾಂತರ ಧಾರ್ಮಿಕ ಸಾಮರಸ್ಯವನ್ನು ಕಾಪಾಡುವಲ್ಲಿ ನಿರಂತರವಾಗಿ ಪ್ರಯತ್ನಿಸುತ್ತಿರುವ ಕಿನ್ನಿಗೋಳಿ ಸಮೀಪದ ಏಳಿಂಜೆ ಯ ಹಿರಿಯ ಕೃಷಿಕ ಜೋಸೆಫ್ ಡಾಲ್ಫಿ ಡಿಸೋಜ ರವರ ಕಾರ್ಯ ನಿಜವಾಗಿಯೂ ಶ್ಲಾಘನೀಯ ಎಂದು ಐಕಳ ಪಂಚಾಯತ್ ಮಾಜಿ ಸದಸ್ಯ ಕೃಷಿಕ ಸುಧಾಕರ ಸಾಲ್ಯಾನ್ ಏಳಿಂಜೆ ಅಭಿಮಾನ ವ್ಯಕ್ತಪಡಿಸಿದ್ದಾರೆ

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×