Breaking News

ಮೂರ್ನಾಲ್ಕು ದಿನಗಳಲ್ಲಿ ಸಾರಿಗೆ ನೌಕರರ ವೇತನ ಪಾವತಿ: ಆತಂಕ ಬೇಡ- ಲಕ್ಷ್ಮಣ ಸವದಿ

ಬೆಂಗಳೂರು : ಕಳೆದ ನಾಲ್ಕು ದಿನಗಳಿಂದ 3500 ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರನ್ನು ಬೆಂಗಳೂರಿನಿಂದ ಅವರ ಊರುಗಳಿಗೆ ಕಳುಹಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯಪಡದೇ ಸಾರಿಗೆ ಸಿಬ್ಬಂದಿ ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಜೀವದ ಭಯ ತೊರೆದು ವೈದ್ಯರು, ಆಶಾ ಕಾರ್ಯಕರ್ತೆಯರು, ಸಾರಿಗೆ ಸಿಬ್ಬಂದಿಗಳು ಕೆಲಸ ಮಾಡಿದ್ದಾರೆ. ಅಂತಹ ಸಿಬ್ಬಂದಿಗಳಿಗೆ ಹಾಗೂ ಆ ತಂಡಕ್ಕೆ ಅಭಿನಂದನೆ ಸಲ್ಲಿಸುವ ಕೆಲಸವನ್ನು ಸರ್ಕಾರದ ವತಿಯಿಂದ ಮಾಡಿದ್ದೇವೆ ಎಂದರು.

Follow us on Social media

About the author