Breaking News

ಮೂಲ್ಕಿ : ಪತ್ನಿ-ಮಕ್ಕಳನ್ನು ಬಾವಿಗೆ ದೂಡಿ ತಾನೂ ಹಾರಿದ ತಂದೆ: ಮೂವರು ಸಾವು..!!

ಮೂಲ್ಕಿ: ಪತ್ನಿ ಮತ್ತು ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಗಂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪ ಹೊಕಾವೇರಿಯಲ್ಲಿ ನಡೆದಿದ್ದು ಮೂವರು ಮಕ್ಕಳು ದಾರುಣ ಅಂತ್ಯ ಕಂಡಿದ್ದಾರೆ.

ಸಪುರುಷನೋರ್ವ ತನ್ನ ಪತ್ನಿ ಮತ್ತು ಮೂವರು ಮಕ್ಕಳನ್ನು ಬಾವಿಗೆ ಹಾಕಿ ಅತ್ಮಹತ್ಯೆಗೆ ಯತ್ನಿಸಿದ ಘಟನೆ ಕಿನ್ನಿಗೋಳಿ ಸಮೀಪದ ಪದ್ಮನೂರು ಶೆಟ್ಟಿಗಾಡುನಲ್ಲಿ ನಡೆದಿದೆ.

ಪದ್ಮನೂರು ಶೆಟ್ಟಿಗಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ತನ್ನ ಮನೆ ಪಕ್ಕದ ಮುಖ್ಯ ರಸ್ತೆ ಬದಿಯಲ್ಲಿ ತೆಂಗಿನಕಾಯಿ, ಹಲಸು ವ್ಯಾಪಾರ ಮಾಡುತ್ತಿದ್ದು ಪತ್ನಿ ಲಕ್ಷೀ ಬೀಡಿ ಕಟ್ಟುತ್ತಿದ್ದು ಕಳೆದ ಒಂದು ವಾರದಿಂದ ಅಂಗಡಿಯೊಂದರಲ್ಲಿ ಕೆಲಸಕ್ಕೆ ಹೋಗುತ್ತಿದ್ದರು.

ಗುರುವಾರ ಬೆಳಿಗ್ಗೆ ಎಂದಿನಂತೆ ಮಕ್ಕಳನ್ನು ಶಾಲೆಗೆ ಕಳುಹಿಸಿ ಕೆಲಸಕ್ಕೆ ಹೋಗಿ ಸಂಜೆ ವಾಪಾಸಾಗುತ್ತಿದ್ದಾಗ ಗಂಡ ಹಿತೇಶ್ ಶೆಟ್ಟಿಗಾರ್ ಬಳಿ ಮಕ್ಕಳು ಎಲ್ಲಿ ಎಂದು ವಿಚಾರಿಸಿದಾಗ, ಎಲೋ ಅಡಗಿರಬಹುದು ಎಂದು ಹೇಳಿದ್ದಾನೆ,

ಮನೆಯಲ್ಲಿ ಹುಡುಕಿ ಸಿಗದಿದ್ದಾಗ ಸಮೀಪದ ಮನೆಯ ಬಾವಿ ಕಡೆ ಹುಡುಕಾಡಿದಾಗ ಬಾವಿಯಲ್ಲಿ ಮಕ್ಕಳು ನೀರಿನಲ್ಲಿ ಕಂಡು ರಕ್ಷಗೆಗೆ ಮುಂದಾದಾಗ ಪತ್ನಿಯನ್ನು ಹಿಂಬಾಲಿಸಿಕೊಂಡು ಬಂದ ಪತಿ ಪತ್ನಿಯನ್ನೂ ಬಾವಿಗೆ ದೂಡಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ,

ಪತ್ನಿ ಲಕ್ಷಿ ಮಕ್ಕಳನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾದ್ಯವಾಗದೆ ಕೂಗಿದಾಗ ರಸ್ತೆಬದಿಯಲ್ಲಿ ಹೂ ಮಾರುವವವರು ಮತ್ತು ಇಬ್ಬರು ಬಾವಿಯ ಬಳಿ ಬಂದು ಹಿತೇಶ್ ಮತ್ತು ಲಕ್ಷೀ ಅವರನ್ನು ಹಗ್ಗದ ಸಹಾಯದಿಂದ ರಕ್ಷಿಸಿದ್ದಾರೆ.

ಕೂಡಲೇ ಮೂಲ್ಕಿ ಪೋಲಿಸರಿಗೆ ಮಾಹಿಸಿ ನೀಡಿದ್ದು, ಅಗ್ನಿ ಶಾಮಕದಳ ಸಹಾಯದಿಂದ ಮೂಲ್ಕಿ ಪೋಲಿಸರು ಮೂವರೂ ಮಕ್ಕಳನ್ನು ಮೇಲೆಕೆತ್ತಿ ಚಿಂತಾಜನಕ ಸ್ಥಿತಿಯಲ್ಲಿ ಅಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೂವರು ಮಕ್ಕಳು ಮೃತಪಟ್ಟಿದ್ದಾರೆ

Follow us on Social media

About the author