Breaking News

ರಾಜ್ಯದಲ್ಲಿ ಕೊರೋನಾಗೆ ಇಂದು ಮೂವರು ಬಲಿ, ಎಸ್ಎಸ್ಎಲ್ ಸಿ ವಿದ್ಯಾರ್ಥಿ ಸೇರಿ 204 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಸಹ ಮಹಾಮಾರಿಗೆ ಮತ್ತೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 72ಕ್ಕೇರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿ ಸೇರಿದಂತೆ 204 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6245ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಗುರುವಾರ 114 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 2976ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2976 ಸಕ್ರಿಯ ಪ್ರಕರಣಗಳಿದ್ದು, 10 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಪತ್ತೆಯಾದ 204 ಸೋಂಕಿತರ ಪೈಕಿ 157 ಮಂದಿ ಹೊರರಾಜ್ಯ ಪ್ರಯಾಣದ ಇತಿಹಾಸ ಹೊಂದಿದ್ದಾರೆ. 

ಯಾದಗಿರಿಯಲ್ಲಿ 66, ಉಡುಪಿಯಲ್ಲಿ 22, ಬೆಂಗಳೂರು ನಗರದಲ್ಲಿ 17, ಕಲಬುರಗಿಯಲ್ಲಿ 16, ರಾಯಚೂರಿನಲ್ಲಿ 15, ಬೀದರ್‌ನಲ್ಲಿ 14, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 9, ಕೋಲಾರದಲ್ಲಿ 6, ಮೈಸೂರು, ರಾಮನಗರದಲ್ಲಿ ತಲಾ 5, ವಿಜಯಪುರದಲ್ಲಿ 4, ಬಾಗಲಕೋಟೆ, ಉತ್ತರಕನ್ನಡದಲ್ಲಿ ತಲಾ 3, ದಕ್ಷಿಣ ಕನ್ನಡ, ಹಾಸನ, ಧಾರವಾಡದಲ್ಲಿ ತಲಾ 2, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಪ್ಪಳದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ಬೆಂಗಳೂರು ನಗರದ 35 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರು ಜ್ವರದ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದು, ದೀರ್ಘಕಾಲದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಇವರು ಬುಧವಾರ ಮೃತಪಟ್ಟಿದ್ದರು.
ನಗರದ 60 ವರ್ಷದ ವ್ಯಕ್ತಿ ಕೂಡ ಜ್ವರದ ಲಕ್ಷಣಗಳಿಂದ ಮೃತಪಟ್ಟಿದ್ದಾರೆ. ಜೊತೆಗೆ, ರಾಯಚೂರಿನ 28 ವರ್ಷದ ಮಹಿಳೆ ಕೂಡ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಬೀದರ್ ಜಿಲ್ಲೆಗೆ ಪ್ರಯಾಣ ಬೆಳೆಸಿದ ಹಿನ್ನೆಲೆ ಹೊಂದಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಇಲಾಖೆ ಮಾಹಿತಿ ನೀಡಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×