Breaking News

ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್

ಮುಂಬೈ: ಸ್ಪೀಕರ್ ಅನುಮತಿ ಪಡೆಯದೆ ವಿಧಾನಸಭಾ ಪ್ರಕ್ರಿಯೆಗಳ ಪ್ರತಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್ ನನ್ನು ಮಹಾರಾಷ್ಟ್ರ ವಿಧಾನಸಭೆ ಕಾರ್ಯದರ್ಶಿ ನೀಡಿದ್ದಾರೆ.

ಅಕ್ಟೋಬರ್ 13 ರಂದು ಈ ನೋಟಿಸ್ ನೀಡಲಾಗಿದ್ದು, ಅಕ್ಟೋಬರ್ 15ರೊಳಗೆ ಲಿಖಿತ ಸ್ಪಷ್ಟನೆ ನೀಡುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.

https://imasdk.googleapis.com/js/core/bridge3.416.2_en.html#goog_1654282914

ಈ ಹಿಂದೆ ಎರಡು ದಿನಗಳ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಅರ್ನಾಬ್ ಗೋಸ್ವಾಮಿ ವಿರುದ್ಧ ಹಕ್ಕು ಚ್ಯುತಿ ಉಲ್ಲಂಘನೆಗಾಗಿ ಸೆಪ್ಚೆಂಬರ್ 16ರಂದು  ಅರ್ನಾಬ್ ಗೋಸ್ವಾಮಿ ಅವರಿಂದ ವಿಧಾನಸಭೆ ಕಾರ್ಯದರ್ಶಿ ಸ್ಪಷ್ಟನೆ ಬಯಸಿದ್ದರು.

ಅಕ್ಟೋಬರ್ 5 ರೊಳಗೆ ಇದಕ್ಕೆ ಪ್ರತಿಕ್ರಿಯಿಸುವಂತೆ ಗಡುವು ನೀಡಲಾಗಿತ್ತು. ಆದರೆ, ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಅಕ್ಟೋಬರ್ 20ರೊಳಗೆ ಪ್ರತಿಕ್ರಿಯೆ ನೀಡುವಂತೆ ಮರು ನೋಟಿಸ್ ನೀಡಲಾಗಿದೆ.

ಸ್ಪೀಕರ್ ಅನುಮತಿ ಪಡೆಯದೆ ಬಳಸದ ವಿಧಾನಸಭೆ ಪ್ರಕ್ರಿಯೆಗಳ ಪ್ರತಿಯನ್ನು ಸಹ  ಗೋಸ್ವಾಮಿಗೆ ಕಳುಹಿಸಲಾಗಿತ್ತು.ಆದರೆ, ಈ ನೋಟಿಸ್ ವಿರುದ್ಧವಾಗಿ ಗೋಸ್ವಾಮಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದಾಗ, ವಿಧಾನಸಭೆ ಪ್ರಕ್ರಿಯೆಗಳ ಪ್ರತಿಯನ್ನು ಸಹ  ಸಲ್ಲಿಸಿದ್ದು, ಹಕ್ಕು ಚ್ಯುತಿ ಉಲ್ಲಂಘನೆಯಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×