Breaking News

ರೈತರು, ವಲಸೆ ಕಾರ್ಮಿಕರು, ಸಣ್ಣ ವ್ಯಾಪಾರಿಗಳಿಗೆ ಪರಿಹಾರ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್

ನವದೆಹಲಿ : ಕೊರೋನಾ ವೈರಸ್ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರು, ವಲಸೆ ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳಿಗಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಪರಿಹಾರ ಪ್ಯಾಕೇಜ್‌ ಅನ್ನು ಪ್ರಕಟಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಘೋಷಿಸಿದ 20 ಲಕ್ಷ ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ನ  ಮತ್ತಷ್ಟು ವಿವರ ಪ್ರಕಟಿಸಿದ ನಿರ್ಮಲಾ ಸೀತಾರಾಮನ್ ಅವರು, ರಸ್ತೆ ಬದಿ ವ್ಯಾಪಾರಿಗಳು, ವಲಸೆ ಕಾರ್ಮಿಕರು, ಸಣ್ಣ ರೈತರು, ಸಣ್ಣ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ಈ ಪ್ಯಾಕೇಜ್​ನಲ್ಲಿ ವಿಶೇಷ ಸವಲತ್ತುಗಳನ್ನು ಒದಗಿಸಲಾಗಿದೆ ಎಂದರು.

ಇಂದು 9 ಪ್ರಮುಖ ನಿರ್ಧಾರಗಳನ್ನು ಘೋಷಿಸಲಾಗುವುದು. ಅದರಲ್ಲಿ ಮೂರು ವಲಸೆ ಕಾರ್ಮಿಕರಿಗೆ, ಒಂದು ಮುದ್ರಾದೊಂದಿಗೆ ಶಿಶು ಸಾಲ, ಮತ್ತೊಂದು ರಸ್ತೆ ಬದಿಯ ವ್ಯಾಪಾರಿಗಳಿಗೆ, ಮತ್ತೊಂದು ಗೃಹ, 1 ಬುಡಕಟ್ಟು ಜನಾಂಗದ ಉದ್ಯೋಗ ಪೀಳಿಗೆಗೆ ಹಾಗೂ ಎರಡು ನಿರ್ಧಾರಗಳು ಸಣ್ಣ ರೈತರನ್ನು ಒಳಗೊಂಡಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾಹಿತಿ ನೀಡಿದರು.

ಕಳೆದ ಮೂರು ತಿಂಗಳಿನಿಂದ ದೇಶದ ರೈತ ಸಮುದಾಯಕ್ಕೆ ಅನುಕೂಲವಾಗುವಂತ ಹಲವು ಯೋಜನೆಗಳನ್ನು ಘೋಷಿಸಲಾಗಿದ್ದು, ಪ್ರಮುಖವಾಗಿ 25 ಲಕ್ಷ ಹೊಸ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ಕಳೆದ ಎರಡು ತಿಂಗಳಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

ವಲಸೆ ಕಾರ್ಮಿಕರು ಸುರಕ್ಷಿತವಾಗಿ ಮನೆ ತಲುಪಲು ಕೇಂದ್ರ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಈಗಾಗಲೇ ಅವರಿಗೆ ಎರಡು ತಿಂಗಳ ಉಚಿತ ರೇಷನ್ ನೀಡುವ ಘೋಷಣೆ ಮಾಡಲಾಗಿದೆ ಎಂದರು.

5 ಕೆಜಿ ಅಕ್ಕಿ ಅಥವಾ ಗೋದಿ, 1 ಕೆಜಿ ಬೆಳೆಕಾಳುಗಳು ಸೇರಿದಂತೆ ಉಚಿತ ರೇಷನ್ ನೀಡಲಾಗುತ್ತಿದ್ದು, ಇದರಿಂದ 8 ಕೋಟಿ ವಲಸೆ ಕಾರ್ಮಿಕರಿಗೆ ಅನುಕೂಲವಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×