Breaking News

ಲಾಕ್’ಡೌನ್ ಸಂಕಷ್ಟದ ವೇಳೆ ವಲಸಿಗರಿಗೆ ಸಹಾಯಹಸ್ತ: ರಾಜ್ಯ ಬಿಜೆಪಿ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ

ಬೆಂಗಳೂರು: ಕೊರೋನಾ ವೈರಸ್ ಲಾಕ್’ಡೌನ್ ಸಂದರ್ಭದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಉತ್ತಮ ಕಾರ್ಯ ನಿರ್ವಹಣೆ ಮಾಡಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ. 

ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ. ನಡ್ಡಾ ಅವರು ಸೇವೆಯೇ ಸಂಘಟನೆ ಅಭಿಯಾನದ ಅವಲೋಕನಾ ಸಭೆಯಲ್ಲಿ ವಿಡಿಯೋ ಮೂಲಕ ಕರ್ನಾಟಕ ಸೇರಿದಂತೆ 7 ವಿವಿಧ ರಾಜ್ಯಗಳ ಬಿಜೆಪಿ ನಾಯಕರ ಜೊತೆೇ ಶನಿವಾರ ಸಂವಾದ ನಡೆಸಿದರು. ಈ ವೇಳೆ, ಸೋಂಕಿನ ಭಯವಿಲ್ಲದೇ ಸಂಕಷ್ಟಕ್ಕೊಳಗಾದ ಲಕ್ಷಾಂತರ ಜನರಿಗೆ ರಾಜ್ಯ ಬಿಜೆಪಿ ಕಾರ್ಯಕರ್ತರು ಸಹಾಯ ಮಾಡಿದ್ದಾರೆ ಎಂದು ರಾಜ್ಯ ಬಿಜೆಪಿ ಪರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು ಮಾಹಿತಿ ನೀಡಿದರು. 

ಈ ಕುರಿತಂತೆ ಸಂವಾದದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಯಡಿಯೂರಪ್ಪ ನೇತೃತ್ವದ ಸರ್ಕಾರ ಲಾಕ್’ಡೌನ್ ವೇಳೆ ಕಷ್ಟದಲ್ಲಿದ್ದವರಿಗೆ ಆಹಾರ ಪೊಟ್ಟಣ, ದಿನಸಿ ಹಾಗೂ ಔಷಧಿ ಪೂರೈಸುವಲ್ಲಿ ಉತ್ತಮ ನಿರ್ವಹಣೆ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ನನಗೆ ಈಗಾಗಲೇ ಮಾಹಿತಿ ಬಂದಿದೆ ಎಂದು ಪ್ರಧಾನಮಂತ್ರಿಗಳು ಅಭಿನಂದನೆ ಸಲ್ಲಿಸಿದರು ಎಂದು ತಿಳಿಸಿದರು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×