ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರ ಗೃಹ ಕಚೇರಿ ಕೃಷ್ಣಾಗೂ ಕೊರೋನಾ ಮಹಾಮಾರಿ ವಕ್ಕರಿಸಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಎಲ್ಲಾ ಅಧಿಕೃತ ಸಭೆಗಳನ್ನು ವಿಧಾನಸೌಧಕ್ಕೆ ಸ್ಥಳಾಂತರಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕಾನ್ ಸ್ಟೇಬಲ್ ಒಬ್ಬರ ಪತಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಗೃಹ ಕಚೇರಿಗೆ ಔಷಧಿ ಸಿಂಪಡನೆ ಮಾಡಲಾಗಿತ್ತು. ಕಚೇರಿಯನ್ನು ಮುಚ್ಚಲಾಗಿದೆ.
ಸದ್ಯ ಮಹಿಳಾ ಕಾನ್ ಸ್ಟೇಬಲ್ ಗಂಟಲು ದ್ರವ್ಯವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿ ಬರಬೇಕಾಗಿದೆ. ಇನ್ನು ಇವರ ಜೊತೆಗೆ ಕಾರ್ಯ ನಿರ್ವಹಿಸಿದ ಎಲ್ಲಾ ಸಿಬ್ಬಂದಿಯನ್ನೂ ಕೊರೋನಾ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ.
Follow us on Social media