Breaking News

ಹುಚ್ಚ ವೆಂಕಟ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳಿಗೆ ಶೋಧ

ಮಂಡ್ಯ: ಸೆಲ್ಫಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಸಿಟ್ಟಿಗೆದ್ದು ಯುವಕನ ಮೇಲೆ ಹಲ್ಲೆ ನಡೆಸಿದ್ದ ಹುಚ್ಚ ವೆಂಕಟ್‍ಗೆ ಯುವಕರ ಗುಂಪು ಮನಬಂದಂತೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಮ್ಮಡಹಳ್ಳಿಯ ಯುವಕ ಸೇರಿದಂತೆ ನಾಲ್ಕೈದು ಮಂದಿ ಯುವಕರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ಜೂ. 10ರಂದು ತಾಲೂಕಿನ ಉಮ್ಮಡಹಳ್ಳಿ ಗೇಟ್ ಬಳಿ ಇರುವ ಅಕ್ರಂಪಾಷ ಎಂಬುವರ ಟೀ ಅಂಗಡಿಯಲ್ಲಿ ಹುಚ್ಚ ವೆಂಕಟ್ ಟೀ ಕುಡಿಯುತ್ತಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಯುವಕರು ಹುಚ್ಚ ವೆಂಕಟ್ ಜೊತೆಗೆ ಸೆಲ್ಫಿ ತೆಗೆದುಕೊಂಡು ರೇಗಿಸಿದ್ದಾರೆ. ಇದರಿಂದ ಕೋಪಗೊಂಡ ಹುಚ್ಚ ವೆಂಕಟ್ ಯುವಕನ ಮೇಲೆ ಹಲ್ಲೆ ನಡೆಸಿದ್ದ. ತಕ್ಷಣ ಸ್ಥಳದಲ್ಲೇ ಇದ್ದ ಆತನ ಸ್ನೇಹಿತರು ಸುತ್ತುವರಿದು ಹುಚ್ಚ ವೆಂಕಟ್‍ನನ್ನು ಮನಬಂದಂತೆ ಥಳಿಸಿ ಪರಾರಿಯಾದರು.

ಯುವಕರು ಹುಚ್ಚ ವೆಂಕಟ್ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರಿಂದ ಆತಂಕಗೊಂಡ ಟೀ ಅಂಗಡಿ ಮಾಲೀಕ ಅಕ್ರಂ ಪಾಷ ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣ ದಾಖಲಿಸಿಕೊಂಡಿರುವ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×