Breaking News

ಅಂಬೇಡ್ಕರ್‌ ಜಯಂತಿ: ಏ.14 ರಂದು ಸಾರ್ವತ್ರಿಕ ರಜೆ ಘೋಷಿಸಿದ ಕೇಂದ್ರ ಸರ್ಕಾರ

ಪುತ್ತೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌ ಅವರು ಹುಟ್ಟಿದ ದಿನ ಏ.14 ರಂದು ಭಾರತದಾದ್ಯಂತ ಕೇಂದ್ರದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಅಂಬೇಡ್ಕರರ ಜಯಂತಿ ದಿನದಂದು ಇನ್ಮುಂದೆ ರಾಷ್ಟ್ರೀಯ ರಜೆ ಇರಲಿದೆ.

ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಘೋಷಣೆ ಮಾಡಿದ್ದಾರೆ. ಭಾರತದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಏಪ್ರಿಲ್ 14 ರ ಸೋಮವಾರದಂದು ರಜೆ ಇರಲಿದೆ. ಈ ನಿರ್ಧಾರದ ಬಗ್ಗೆ ಸಂಬಂಧಪಟ್ಟ ಎಲ್ಲರಿಗೂ ತಿಳಿಸಲು ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೂಚಿಸಲಾಗಿದೆ.

Follow us on Social media

About the author