Breaking News

ಕುಂದಾಪುರ ಉಪವಿಭಾಗಾಧಿಕಾರಿ ಕೆ. ಮಹೇಶ್ಚಂದ್ರ ಅಮಾನತು

ಉಡುಪಿ: ಸರಕಾರದ ಆದೇಶದಂತೆ ಕುಂದಾಪುರ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿರುವ ಕಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಕೆ. ಮಹೇಶ್ಚಂದ್ರ ಇವರ ವಿರುದ್ಧದ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಈ ಅಧಿಕಾರಿಯವರ ಲೀನ್‌ನ್ನು ಕೌನ್ಸಿಲ್ ಕಾರ್ಯದರ್ಶಿ ಕಲಬುರಗಿ ನಗರ ಕಾರ್ಪೋರೇಷನ್ ಕಲಬುರಗಿ ಇಲ್ಲಿಗೆ ವರ್ಗಾಯಿಸಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಸರಕಾರದ ಆದೇಶದಂತೆ ಈ ಅಧಿಕಾರಿಯನ್ನು ಕುಂದಾಪುರ ಉಪವಿಭಾಗಾಧಿಕಾರಿ ಹುದ್ದೆಯ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ಅಲ್ಲದೇ ಕುಂದಾಪುರ ಉಪವಿಭಾಗದ ಉಪವಿಭಾಗಾಧಿಕಾರಿ ಹುದ್ದೆಯ ಪ್ರಭಾರವನ್ನು ಈಗ ಬ್ರಹ್ಮಾವರ ತಾಲೂಕಿನ ತಹಶೀಲ್ದಾರ್ ಆಗಿರುವ ಶ್ರೀಕಾಂತ್ ಎಸ್.ಹೆಗ್ಡೆ ಇವರಿಗೆ ವಹಿಸಿ ಮುಂದಿನ ಆದೇಶದವರೆಗೆ ಹೆಚ್ಚುವರಿಯಾಗಿ ನಿರ್ವಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

Follow us on Social media

About the author