Breaking News

ಪಾಕ್‌ ಕ್ಷಿಪಣಿ ದಾಳಿ ಬೆನ್ನಲ್ಲೇ ಅಲರ್ಟ್‌ – ದೇಶಾದ್ಯಂತ 24 ಏರ್‌ಪೋರ್ಟ್‌ಗಳು ತಾತ್ಕಾಲಿಕ ಬಂದ್‌

ನವದೆಹಲಿ: ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಭಾರತ ʻಆಪರೇಷನ್‌ ಸಿಂಧೂರʼ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಭಿಕಾರಿಸ್ತಾನದ ಮೇಲೆ ಮಿಸೈಲ್‌ಗಳ ಸುರಿಮಳೆಗೈದಿದೆ. ಈ ನಡುವೆ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಆದ್ರೆ ಪಾಕ್‌ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತ ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಪ್ಲ್ಯಾನ್‌ ಮಾಡಿಕೊಳ್ಳುವಂತೆ ತಿಳಿಸಿವೆ. ಇನ್ನೂ ದೇಶಾದ್ಯಂತ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಭದ್ರತೆ ಹೆಚ್ಚಿಸಿರುವ ಕಾರಣ ಕೆಲವು ವಿಮಾನಗಳ ಹಾರಾಟಗಳು ರದ್ದಾಗಿವೆ. ಪ್ರಯಾಣಿಕರು ತಮ್ಮ ವಿಮಾನಯಾನದ ಬಗ್ಗೆ ಮಾಹಿತಿ ತಿಳಿದುಕೊಂಡು ಏರ್‌ಪೋರ್ಟ್‌ಗೆ ಬರಲು ಸೂಚಿಸಲಾಗಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×