ಉಡುಪಿ: ಮಹಿಳೆಯೊಬ್ಬರು ಪ್ರಾರ್ಥನೆ ಮಾಡುತ್ತಿದ್ದಾಗ ಹಠಾತ್ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯ ಅಜ್ಜರಕಾಡಿನ ಚರ್ಚ್ನಲ್ಲಿ ಭಾನುವಾರ (ಮೇ 25) ನಡೆದಿದೆ.
ಮೃತರನ್ನು ಕುಂದಾಪುರ ಖಾರ್ವಿ ಕೆಳಕೇರಿ ನಿವಾಸಿ ಶಾಂತಿ (52) ಎಂದು ಗುರುತಿಸಲಾಗಿದೆ.
ಶಾಂತಿ ಅವರು ಅಜ್ಜರಕಾಡಿನ ಚರ್ಚ್ ನನಲ್ಲಿ ಬೆಳಿಗ್ಗೆ 11:15 ರಿಂದ 11:30 ಗಂಟೆಯ ಮಧ್ಯಾವಧಿಯಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಹಠಾತ್ ಕುಸಿದು ಬಿದ್ದರು. ಅವರನ್ನೂ ಕೂಡಲೇ ಆಸ್ಪತ್ರೆಗೆ ಕರೆದೊಯ್ದರಾದರೂ ಅದಾಗಲೇ ಮೃತಪಟ್ಟಿದ್ದರು.
ಮೃತರು ಕಳೆದ ಐದು ವರ್ಷಗಳಿಂದ ಥೈರಾಡ್ ಮತ್ತು ಗರ್ಭಕೋಶ ಖಾಯಿಲೆಯಿಂದ ಬಳಲುತ್ತಿದ್ದು, ಈ ಬಗ್ಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಇದೇ ಖಾಯಿಲೆಯು ಉಲ್ಬಣಗೊಂಡು ಮೃತಪಟ್ಟಿರಬಹುದು ಎಂದು ಶಾಂತಿ ಅವರ ಪುತ್ರಿ ಉಡುಪಿ ನಗರ ಪೊಲೀಸ್ ಠಾಣೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
Follow us on Social media