ಬಂಟ್ವಾಳ: ಶಂಕಿತ ಡೆಂಗ್ಯೂ ಜ್ವರಕ್ಕೆ ತಾಲೂಕಿನ ಅಮ್ಟಾಡಿ ಗ್ರಾಮದ ಕಿನ್ನಿಬೆಟ್ಟಿನ ವಿದ್ಯಾರ್ಥಿಯೋರ್ವ ಬಲಿಯಾದ ಘಟನೆ ಮೇ 30ರ ಶುಕ್ರವಾರ ನಡೆದಿದೆ.
ಕಿನ್ನಿಬೆಟ್ಟು ನಿವಾಸಿ ಗೋಪಾಲ ಗೌಡ ಅವರ ಪುತ್ರ ಹಿತೇಶ್(೧೭) ಮೃತ ಬಾಲಕ.
ಕಳೆದ ಹಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈತ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.
ಮೇ 30 ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜ್ವರದಿಂದ ಆತನಿಗೆ ಪ್ಲೇಟ್ಲೇಟ್ ಕಡಿಮೆಯಾಗಿತ್ತು ಎನ್ನಲಾಗಿದೆ.
Follow us on Social media