Breaking News

ಜನೌಷಧಿ ಕೇಂದ್ರಗಳ ಸದುಪಯೋಗ ಪಡಿಸಿಕೊಳ್ಳಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ

ಹಾವೇರಿ : ಬಡಜನರು, ರೋಗಿಗಳು ಸಾಧ್ಯವಾದಷ್ಟು ಜನೌಷಧಿ ಕೇಂದ್ರಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹಿರೇಕೆರೂರ ವಿಧಾನಸಭಾ ಕ್ಷೇತ್ರದ ಶಾಸಕ, ಕೃಷಿ ಸಚಿವರೂ ಆಗಿರುವ ಬಿ.ಸಿ.ಪಾಟೀಲ್ ಅವರು ಕರೆ ನೀಡಿದ್ದಾರೆ.
ಇಂದು ಬೆಳಿಗ್ಗೆ ಹಿರೇಕೆರೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ, ಜನೌಷಧಿ ದಿವಸ್ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಭೆಯನ್ನುದ್ದೇಶಿಸಿ ಸಚಿವರು ಮಾತನಾಡಿದರು.
ಇಂದಿಗೆ ಪ್ರಧಾನ ಮಂತ್ರಿಗಳ ಜನಪರ ಕಾರ್ಯಕ್ರಮಗಳಲ್ಲೊಂದಾದಂತಹ ಜನೌಷಧಿ ಕಾರ್ಯಕ್ರಮ ಜಾರಿಗೊಳಿಸಿ ಒಂದು ವರ್ಷವಾಗಿದೆ. ಇದರ ನೆನಪಿಗಾಗಿ ಸರ್ಕಾರದ ಜನೌಷಧಿ ಕೇಂದ್ರಗಳಲ್ಲಿ ಒಂದು ವರ್ಷದ ಆಚರಣೆಯನ್ನು ದೇಶಾದ್ಯಂತ ಇಂದು ಆಚರಿಸಲಾಗುತ್ತಿದೆ.

Source : UNI

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×