Breaking News

ಉಡುಪಿ: ಸಿದ್ದರಾಮಯ್ಯನ ಕೊಂದ್ರೆ ಹಿಂದೂಗಳಿಗೆ ನೆಮ್ಮದಿ: ಪೋಸ್ಟ್ ಹಾಕಿದ್ದ ಹೋಂ ಗಾರ್ಡ್​ ಅರೆಸ್ಟ್

ಉಡುಪಿ: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಪೊಲೀಸರು 8 ಜನರನ್ನು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ. ಇದರ ಮಧ್ಯ ಸುಹಾಸ್ ಶೆಟ್ಟಿ ಕೊಲೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರತೀಕಾರದ ಬೆದರಿಕೆಗಳು ಹರಿದಾಡುತ್ತಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಹೋಂ ಗಾರ್ಡ್​ ಅವಹೇಳನಕಾರಿ ಕಮೆಂಟ್ ಮಾಡಿದ ಬಗ್ಗೆ ತಿಳಿದು ಬಂದಿದೆ.

ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಕಾಮೆಂಟ್ ಹಾಕಿದ್ದ ಉಡುಪಿಯ ಕಾರ್ಕಳದ ಹೋಂ ಗಾರ್ಡ್ ಸಂಪತ್ ಸಾಲಿಯಾನ್​ ಬಂಧನವಾಗಿದೆ.

ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂಪತ್ ಸಾಲಿಯಾನ್​ ಎನ್ನುವಾತ ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಸಂಪತ್ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಹಾಕಿದ್ದಾನೆ. ಈ ಸಂಬಂಧ ಕಾರ್ಕಳ ಪೊಲೀಸರು ಹೋಂ ಗಾರ್ಡ್ ಸಂಪತ್​ನನ್ನು ಬಂಧಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×