Breaking News

ಮಂಗಳೂರು ಕೈಗಾರಿಕೆಗಳ ಪ್ರಾರಂಭಕ್ಕೆ ದೃಢೀಕರಣ ಅಗತ್ಯ: ಜಿಲ್ಲಾಧಿಕಾರಿ

ಮಂಗಳೂರು : ಲಾಕ್ ಡೌನ್ ಅವಧಿಯಲ್ಲಿ ಕೈಗಾರಿಕೆಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವ್ಯಾಪ್ತಿಗೆ ಬರುವ ಇತರ ಚಟುವಟಿಕೆಗಳು ಸ್ವಯಂ ದೃಢೀಕರಣ ಸಲ್ಲಿಸಿ ಕೈಗಾರಿಕೆ ಪ್ರಾರಂಭಿಸಲು ಸರಕಾರ ಸುತ್ತೋಲೆ ಹೊರಡಿಸಿದೆ.
ಸರಕಾರಿ ಆದೇಶದಂತೆ, ಅರ್ಹರಿರುವ ಕೈಗಾರಿಕೆಗಳು, ಐಟಿ/ಐಟಿಇಎಸ್ ಕಂಪನಿಗಳು, ಡಾಟಾ/ಕಾಲ್ ಸೆಂಟರ್‍ಗಳು, ಟೆಲಿ ಕಮ್ಯುನಿಕೇಷನ್, ಇಂಟರ್ನೆಟ್ ಸರ್ವಿಸಸ್, ಇಂಕ್ಯೂಬರೇಟರ್‌ಗಳು ಹಾಗೂ ಇನ್ನಿತರ ಕಂಪೆನಿಗಳು ಕಾರ್ಯನಿರ್ವಹಿಸುವ ಬಗ್ಗೆ ಆನ್‍ಲೈನ್‍ನಲ್ಲಿ ಸ್ವಯಂ ದೃಢೀಕರಣ ಸಲ್ಲಿಸಿದ ನಂತರ ಘಟಕ ಪ್ರಾರಂಭಿಸಬಹುದಾಗಿದೆ. ಈಗಾಗಲೇ ಪ್ರಾರಂಭಿಸಿರುವ ಘಟಕಗಳು ಸಹ ಈ ಲಿಂಕ್ ಮೂಲಕ ಸ್ವಯಂ ದೃಢೀಕರಣ ಸಲ್ಲಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 (ಕೋರೋನಾ ವೈರಾಣು ಕಾಯಿಲೆ 2019)ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸರಕಾರದ ಆದೇಶದಲ್ಲಿ ನೀಡಿದ ಸಡಿಲಿಕೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ರನ್ವಯ ಮೇ 4 ರಿಂದ 17 ರವರೆಗೆ ಪ್ರತಿ ದಿನ ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ನಿಷೇಧಾಜ್ಞೆಯನ್ನು ವಿಧಿಸಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×