Breaking News

ಆ.20ಕ್ಕೆ ಸಿಇಟಿ ಫಲಿತಾಂಶ ಪ್ರಕಟ: ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು: ಉನ್ನತ ಶಿಕ್ಷಣ ಸಚಿವ, ಡಿಸಿಎಂ  ಅಶ್ವತ್ಥ ನಾರಾಯಣ ಮಾತನಾಡಿ ಆ.20ಕ್ಕೆ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.

ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಇಂಜಿನಿಯರಿಂಗ್ ಸೀಟುಗಳ ಶುಲ್ಕ ಏರಿಕೆ ಇರುವುದಿಲ್ಲ. ಸೀಟು ಹಂಚಿಕೆ ಸಹ ಕಳೆದ ಸಾಲಿನಲ್ಲಿರುವಂತೆಯೇ ಮುಂದುವರಿಯಲಿದೆ ಎಂದು ಸಚಿವರು ಹೇಳಿದ್ದಾರೆ.

ಕಳೆದ ವರ್ಷ ಶೇ.33ರಷ್ಟು ಶುಲ್ಕ ಏರಿಕೆ ಮಾಡಲಾಗಿತ್ತು, ಈ ಸಾಲಿನಲ್ಲಿ ಯಾವ ಶುಲ್ಕ ಏರಿಕೆಯಾಗಲಿ, ಸೀಟು ಹಂಚಿಕೆಯಲ್ಲಿ ವ್ಯತ್ಯಾಸವಾಗಲಿ ಇಲ್ಲ ಎಂದು ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ಅಕ್ಟೋಬರ್ ನಲ್ಲಿ ಕೌನ್ಸಲಿಂಗ್ ನಡೆಸಲಾಗುತ್ತದೆ ಎಂದೂ ಅವರು ಇದೇ ವೇಳೆ ತಿಳಿಸಿದರು,

Follow us on Social media

About the author