ಮಂಗಳೂರು: ತುಳು ಭಾಷೆ ರಾಜ್ಯದ ಅಧಿಕೃತ ಭಾಷೆಯಾಗಬೇಕು. ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಜವಾಬ್ದಾರಿ ನನ್ನ ಮೇಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ನೂತನ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ತಿಳಿಸಿದ್ದಾರೆ.ನಗರದ ಉರ್ವಸ್ಟೋರ್ ಸಮೀಪದ ತುಳುಭವನದಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ತುಳು ಭಾಷೆಯು ಪಠ್ಯವಾಗಿ ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು ಹಂತದವರೆಗೂ ಆಯೋಜನೆಯಾಗಬೇಕು. ಅಲ್ಲದೆ, ತುಳು ಲಿಪಿಯ ಕಲಿಕೆ ಪ್ರಾಥಮಿಕ ಶಾಲೆಯಿಂದಲೇ ಆಗಬೇಕೆಂಬ ಬಯಕೆ ಇದೆ ಎಂದರು.
Follow us on Social media