ರಾಜ್ಯದಲ್ಲಿ 36 ಹೊಸ ಕೊರೋನಾ ಪ್ರಕರಣಗಳು ಪತ್ತೆ, ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆ May 9, 2020 ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಏರಿಕೆಯಾಗುತ್ತಲೇ ಇದೆ. ಶುಕ್ರವಾರ ಸಂಜೆಯಿಂದ ಶನಿವಾರ ಮಧ್ಯಾಹ್ನದ ವರೆಗೆ ರಾಜ್ಯದಲ್ಲಿ ಮತ್ತೆ 36 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಕರ್ನಾಟಕದ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ… Continue Reading
ಪಶ್ಚಿಮ ಬಂಗಾಳಕ್ಕೆ ರೈಲು ಹೋಗಲು ಬಿಡುತ್ತಿಲ್ಲ, ಇದು ಕಾರ್ಮಿಕರಿಗೆ ಮಾಡುತ್ತಿರುವ ಅನ್ಯಾಯ:ಅಮಿತ್ ಶಾ ಆರೋಪ May 9, 2020 ನವದೆಹಲಿ : ವಲಸೆ ಕಾರ್ಮಿಕರನ್ನು ಕರೆದೊಯ್ಯುವ ಶ್ರಮಿಕ ವಿಶೇಷ ರೈಲನ್ನು ಪಶ್ಚಿಮ ಬಂಗಾಳ ರಾಜ್ಯದೊಳಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಇದರಿಂದ ವಲಸೆ ಕಾರ್ಮಿಕರಿಗೆ ಕಷ್ಟವಾಗುತ್ತಿದೆ ಎಂದು… Continue Reading
ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ May 9, 2020 ಮಂಗಳೂರು : ಫಸ್ಟ್ ನ್ಯೂರೋ ಆಸ್ಪತ್ರೆಯ ಹೊಡೆತಕ್ಕೆ ನಲುಗಿದ ಕಡಲತಡಿ ಮಂಗಳೂರು ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ಪತ್ತೆ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷನಿಗೆ ಸೋಂಕು ದೃಢ ಮೇ.1ರಂದು ಕೊರೋನ… Continue Reading
ರಾಕಿ ಬಾಯ್ ಯಶ್ ಚಿತ್ರದ ಅಕ್ರಮ ಪ್ರಸಾರ: ತೆಲುಗು ಚಾನಲ್ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾದ ಕೆಜಿಎಫ್ ಟೀಂ May 9, 2020 ರಾಕಿ ಬಾಯ್ ಯಶ್ ಅಭಿನಯದ ಬಿಗ್ ಬಜೆಟ್ ಚಿತ್ರ ಕೆಜಿಎಫ್ ಚಾಪ್ಟರ್ 1 ಅದ್ಭುತ ಯಶಸ್ಸು ಗಳಿಸಿದ್ದು ಎಲ್ಲರಿಗೆ ಗೊತ್ತಿರುವ ಸಂಗತಿ. ಇದೀಗ ಚಾಪ್ಟರ್ 2 ಸಹ ಬಿಡುಗಡೆಗಾಗಿ ದಿನಗಣನೆ ಪ್ರಾರಂಭಗೊಂಡಿದೆ. ಈ… Continue Reading
‘ಮುಖ್ಯಮಂತ್ರಿಗಳೇ ನಿಮ್ಮ ಕೆಲಸಕ್ಕೆ ಹ್ಯಾಟ್ಸ್ ಆಫ್’:ಯಡಿಯೂರಪ್ಪನವರನ್ನು ಹಾಡಿ ಹೊಗಳಿದ ಸಚಿವ ಸುರೇಶ್ ಕುಮಾರ್ May 9, 2020 ಬೆಂಗಳೂರು : ಕರ್ನಾಟಕ ಸೇರಿದಂತೆ ಇಡೀ ಜಗತ್ತು ಇಂದು ಕೊರೋನಾ ಸವಾಲನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ನಮ್ಮ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕಳೆದ 50 ದಿನಗಳಿಂದ ಸಮಯಕ್ಕೆ ಸರಿಯಾಗಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ… Continue Reading
ರಾಮನಗರ: ಮಲಗಿದ್ದ ಮಗು ಚಿರತೆಗೆ ಬಲಿ May 9, 2020 ರಾಮನಗರ : ಮನೆಯಲ್ಲಿ ಮಲಗಿದ್ದ 3 ವರ್ಷದ ಗಂಡು ಮಗುವನ್ನು ಚಿರತೆಯೊಂದು ಹೊತ್ತೊಯ್ದು ಕೊಂದು ತಿಂದಿರುವ ಘಟನೆ ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಚಂದ್ರಣ್ಣ ಹಾಗೂ ಮಂಗಳಗೌರಮ್ಮ ದಂಪತಿಯ… Continue Reading
ಕೇಂದ್ರದಿಂದ ರೂ.50,000 ಕೋಟಿ ವಿಶೇಷ ಪ್ಯಾಕೇಜ್ ಕೇಳಿ: ಸರ್ಕಾರಕ್ಕೆ ಪ್ರತಿಪಕ್ಷ ನಿಯೋಗ ಆಗ್ರಹ May 9, 2020 ಬೆಂಗಳೂರು : ಲಾಕ್”ಡೌನ್’ನಿಂದಾಗಿ ಜನತೆಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ರಾಜ್ಯಕ್ಕೆ ರೂ.50 ಸಾವಿರ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಒತ್ತಾಯಿಸಬೇಕು ಮತ್ತು ಕೊರೋನಾ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಪರಿಹಾರ… Continue Reading
ವಿಶೇಷ ರೈಲಿನಲ್ಲಿ ವಲಸೆ ಕಾರ್ಮಿಕರ ಮೃತದೇಹ ಮಧ್ಯಪ್ರದೇಶಕ್ಕೆ:ಔರಂಗಾಬಾದ್ ದುರ್ಘಟನೆ ತನಿಖೆಗೆ ಆದೇಶ May 9, 2020 ಔರಂಗಾಬಾದ್ : ಗೂಡ್ಸ್ ರೈಲು ಹರಿದು ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಮೃತಪಟ್ಟ 16 ಮಂದಿ ವಲಸೆ ಕಾರ್ಮಿಕರ ಮೃತದೇಹಗಳನ್ನು ವಿಶೇಷ ರೈಲಿನಲ್ಲಿ ಮಧ್ಯ ಪ್ರದೇಶಕ್ಕೆ ಕಳುಹಿಸಲಾಗಿದೆ. ಜಲ್ನಾದಿಂದ ಔರಂಗಾಬಾದ್ ಗೆ ತೆರಳುತ್ತಿದ್ದ ಗೂಡ್ಸ್ ರೈಲು… Continue Reading
ಅಂತ್ಯ ಸಂಸ್ಕಾರಕ್ಕೆ 20 ಜನ ಸೇರುವಂತಿಲ್ಲ, 1000 ಜನ ಮದ್ಯದಂಗಡಿ ಮುಂದೆ ನಿಲ್ಲಬಹುದೇ?: ಕೇಂದ್ರದ ವಿರುದ್ಧ ಶಿವಸೇನೆ ಕಿಡಿ May 9, 2020 ಮುಂಬೈ : ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ, ಮದ್ಯದಂಗಡಿ ಮುಂದೆ 1000 ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಶನಿವಾರ ತೀವ್ರವಾಗಿ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ… Continue Reading
ಛತ್ತೀಸ್ ಗಢದಲ್ಲಿ ಎನ್ ಕೌಂಟರ್: ಸಬ್ ಇನ್ಸ್ ಪೆಕ್ಟರ್ ಹುತಾತ್ಮ, ನಾಲ್ವರು ನಕ್ಸಲರ ಹತ್ಯೆ May 9, 2020 ರಾಯ್ಪುರ : ಮಾವೋವಾದಿಗಳ ಜೊತೆಗೆ ನಡೆದ ಎನ್ ಕೌಂಟರ್ ನಲ್ಲಿ ಇಲ್ಲಿನ ಮದನ್ವಾಡ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಹುತಾತ್ಮರಾಗಿದ್ದಾರೆ. ಕಳೆದ ರಾತ್ರಿ ಮನ್ ಪುರ್ ಪೊಲೀಸ್ ಠಾಣೆ ಸರಹದ್ದಿನ ಪರ್ದೊನಿ ಗ್ರಾಮದ… Continue Reading
ಮಂಗಳೂರು : ವಲಸೆ ಕಾರ್ಮಿಕರ ಪ್ರಯಾಣ ರೈಲು ವ್ಯವಸ್ಥೆ ಸಂಸದ ನಳಿನ್ ಕುಮಾರ್ ಕಟೀಲ್ May 9, 2020 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹೊರರಾಜ್ಯದ ವಲಸೆ ಕಾರ್ಮಿಕರು ತಮ್ಮ ಸ್ವಂತ ರಾಜ್ಯಕ್ಕೆ ಹೋಗಲು ಅಗತ್ಯ ಇರುವಷ್ಟು ರೈಲುಗಳನ್ನು ಒದಗಿಸಲು ಸಿದ್ಧರಿರುವುದಾಗಿ ಕೇಂದ್ರ ಸರಕಾರ ತಿಳಿಸಿದೆ ಎಂದು ಲೋಕಸಭಾ ಸದಸ್ಯ ನಳಿನ್… Continue Reading
ಗುಜರಾತ್, ತಮಿಳುನಾಡು, ಮಹಾರಾಷ್ಟ್ರದಲ್ಲಿ ಕೋರೋನಾ ಸ್ಫೋಟ: ದೇಶದಲ್ಲಿ 60,000 ಗಡಿಯತ್ತ ಸೋಂಕಿತರ ಸಂಖ್ಯೆ May 9, 2020 ನವದೆಹಲಿ : ಗುಜರಾತ್, ತಮಿಳುನಾಡು ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನದಲ್ಲಿ ದೇಶದಲ್ಲಿ 3320 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರಂತೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 60,000 ಗಡಿಯತ್ತ… Continue Reading