Breaking News

‘ಅತಿವೃಷ್ಟಿಯಿಂದ ನಲುಗಿಹೋದ ಜಿಲ್ಲೆಗಳ ಸಂತ್ರಸ್ತರ ಪಾಲಿಗೆ ಸರ್ಕಾರ ಸತ್ತುಹೋಗಿದೆ’ – ಸಿದ್ದರಾಮಯ್ಯ ಕಿಡಿ

ಬೆಂಗಳೂರು : ನಾವು ಹೇಳಿದರೆ ರಾಜಕೀಯ ಎನ್ನುತ್ತೀರಿ. ಕಳೆದ ವರ್ಷ ಅತಿವೃಷ್ಟಿಯಿಂದ ನಲುಗಿಹೋದ 22 ಜಿಲ್ಲೆಗಳ ಸಂತ್ರಸ್ತರ ಪಾಲಿಗೆ ನಿಮ್ಮ‌ ಸರ್ಕಾರ ಸತ್ತುಹೋಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, ನಾವು ಹೇಳಿದರೆ ರಾಜಕೀಯ ಎನ್ನುತ್ತೀರಿ. ಸಿಎಂ ಅವರೇ, ಈ ಪತ್ರಿಕಾ ವರದಿಗಳನ್ನಾದರೂ ಒಪ್ಪಿಕೊಳ್ತೀರಾ? ಕಳೆದ ವರ್ಷ ಅತಿವೃಷ್ಟಿಯಿಂದ ನಲುಗಿಹೋದ 22 ಜಿಲ್ಲೆಗಳ ಸಂತ್ರಸ್ತರ ಪಾಲಿಗೆ ನಿಮ್ಮ‌ ಸರ್ಕಾರ ಸತ್ತುಹೋಗಿದೆ. ಅವರ ಬಾಯಿಯಿಂದಲೇ ಕೇಳಿ, ಹೃದಯ ಇದ್ದರೆ ಅವರ ಕಷ್ಟಗಳಿಗೆ ಸ್ಪಂದಿಸಿ ಪುಣ್ಯ ಕಟ್ಕೊಳ್ಳಿ ಎಂದಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿಗೆ ಸಿಎಂ ಅವರು ಕೇಳಿದ್ದು ರೂ.35,160 ಕೋಟಿ ಪ್ರಧಾನಿ ಮೋದಿ ಅವರು ಕೊಟ್ಟಿದ್ದು ರೂ.1869 ಕೋಟಿ. ಶೆಡ್‌ಗಳಲ್ಲಿ ನರಳುತ್ತಿರುವ ಸಂತ್ರಸ್ತರು, ಕುಸಿದ ಮನೆಗಳು, ಹಾಳಾದ ರಸ್ತೆಗಳು, ಮುರಿದ ಸೇತುವೆಗಳು.. ಎಲ್ಲವೂ ಬಿಜೆಪಿ ಸರ್ಕಾರದ ವರ್ಷದ ಸಂಭ್ರಮವನ್ನು ಅಣಕಿಸುವಂತೆ‌ ಹಾಗೆಯೇ ಇದೆ, ಕಣ್ಬಿಟ್ಟು ನೋಡಿ ಎಂದು ಆರೋಪಿಸಿದ್ದಾರೆ.

Follow us on Social media

About the author