Breaking News

ಪಿಯು ಪರೀಕ್ಷೆ ಯಶಸ್ವಿ ಭವಿಷ್ಯಕ್ಕೆ ಮೆಟ್ಟಿಲಾಗಲಿ- ಯಡಿಯೂರಪ್ಪ

ಬೆಂಗಳೂರು : ಇಂದಿನಿಂದ ರಾಜ್ಯದ 1016 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಭ ಕೋರಿದ್ದಾರೆ.
ವಿದ್ಯಾರ್ಥಿ ಜೀವನದ ಮುಖ್ಯ ಹಂತ ಇದಾಗಿದ್ದು, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆ ಮೂಲಕ ನಾಡಿನ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ. ಪರೀಕ್ಷೆ ಯಶಸ್ವಿ ಭವಿಷ್ಯಕ್ಕೆ ಮೆಟ್ಟಿಲಾಗಲಿ ಎಂದು ಶುಭ ಹಾರೈಸಿದ್ದಾರೆ.

Source : UNI

Follow us on Social media

About the author