Breaking News

ರಾಜ್ಯದಲ್ಲಿ ಇಂದು 317 ಮಂದಿಗೆ ಕೊರೋನಾ ಸೋಂಕು, 7 ಸೋಂಕಿತರ ಸಾವು

ಬೆಂಗಳೂರು: ರಾಜ್ಯಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಒಟ್ಟು 317 ಮಂದಿಗೆ ಕೊರೋನಾ ವೈರಸ್ ಒಕ್ಕರಿಸಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 317 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 7530ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದೂ ಕೂಡ ರಾಜ್ಯದಲ್ಲಿ 7 ಸೋಂಕಿತರು ಮೃತಪಟ್ಟಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ. 

ಇನ್ನು ರಾಜ್ಯಾದ್ಯಂತ ಇಂದು ಒಟ್ಟು 322 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ನಿಂದ ಗುಣಮುಖರಾದವರ ಸಂಖ್ಯೆ 4456ಕ್ಕೆ ಏರಿಕೆಯಾಗಿದೆ. ಉಳಿದಂತೆ ರಾಜ್ಯದಲ್ಲಿ ಪ್ರಸ್ತುತ 2976 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ ಗಂಭೀರ ಸ್ಥಿತಿಯಲ್ಲಿರುವ 72 ಮಂದಿ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  78 ಮಂದಿ ಸೋಂಕಿತರು ಅಂತಾರಾಷ್ಚ್ರೀಯ ಪ್ರಯಾಣಿಕರಾಗಿದ್ದು, 108 ಮಂದಿ ಸೋಂಕಿತರು ಅಂತರ್ ರಾಜ್ಯ ಪ್ರಯಾಣ ಹಿನ್ನಲೆ ಹೊಂದಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇಂದು ಪತ್ತೆಯಾದ 317 ಹೊಸ ಪಾಸಿಟಿವ್ ಪ್ರಕರಣ ಗಳ ಪೈಕಿ ಬೆಂಗಳೂರಿನಲ್ಲಿ ಇಂದು 47 ಮಂದಿಗೆ ಸೋಂಕು ತಗುಲಿದ್ದು, ಕಲಾಸಿ ಪಾಳ್ಯದಲ್ಲಿ ಕರ್ತವ್ಯ ನಿರ್ವಹಿಸಿದ್ದ ಮಹಿಳಾ ಪೊಲೀಸ್ ಕಾನ್‍ಸ್ಟೇಬಲ್ ಗೆ ಸೋಂಕು ತಗುಲಿದೆ.

https://twitter.com/DHFWKA/status/1272880368174202883
Follow us on Social media

About the author