Breaking News

ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ ನಿಧನ

ಬೆಂಗಳೂರು: ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ ಸತ್ಯನಾರಾಯಣ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಶಿರಾ ಶಾಸಕ ಬಿ. ಸತ್ಯನಾರಾಯಣ ಅವರು ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ನವಗರದ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಲೀವರ್ ಡ್ಯಾಮೇಜ್ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸತ್ಯನಾರಾಯಣರಿಗೆ ಲೀವರ್ ಟ್ರಾನ್ಸ್ ಪ್ಲಾಂಟ್​ಗೆ ಸಿದ್ಧತೆ ನಡೆಸಿದ್ದಾಗಲೇ ಅವರು ನಿಧನರಾಗಿದ್ದಾರೆ. 

ಇನ್ನು ಲೀವರ್ ಸಮಸ್ಯೆ ಜೊತೆ ಅವರಿಗೆ ನ್ಯೂಮೋನಿಯಾ ಸಹ ಕಾಡಿತ್ತು ಎನ್ನಲಾಗಿದೆ. 

Follow us on Social media

About the author